Categories: ಕೋಲಾರ

ಕೃಷ್ಣಾಪುರ ಗ್ರಾಮದಲ್ಲಿಯೇ ಮತಗಟ್ಟೆ ಮರು ಸ್ಥಾಪಿಸುವರೆಗೂ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಅಮ್ಮನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷ್ಣಾಪುರ ಗ್ರಾಮದಲ್ಲಿಯೇ ಮತಗಟ್ಟೆ ಕೇಂದ್ರವನ್ನು ಮರು ಸ್ಥಾಪಿಸಬೇಕು ಇಲ್ಲದೇ ಹೋದರೆ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ವಾಗ್ದಾನ ಮಾಡಿದರು.

ಈ ಸಂದರ್ಭದಲ್ಲಿ ಪ್ರಗತಿಪರ ರೈತ ರಾಜಣ್ಣ ಮಾತನಾಡಿ ಸುಮಾರು 30 ವರ್ಷಗಳಿಂದ ಕೃಷ್ಣಾಪುರ ಗ್ರಾಮದ ಮತಗಟ್ಟೆಯಲ್ಲಿಯೇ ಗ್ರಾಮಸ್ಥರು ಮತದಾನವನ್ನು ಮಾಡಿಕೊಂಡು ಬಂದಿದ್ದು ಈ ಚುನಾವಣೆಯಲ್ಲಿ ಅಮ್ಮನಲ್ಲೂರು ಗ್ರಾಮಕ್ಕೆ ಮತದಾನದ ಕೇಂದ್ರವನ್ನು ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೃಷ್ಣಾಪುರ ಗ್ರಾಮದಲ್ಲಿ ಸುಮಾರು ೧೪೦ ಮನೆಗಳಿದ್ದು ೩೬೦ಕ್ಕೂ ಹೆಚ್ಚು ಮತದಾರರಿದ್ದಾರೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಡಿ ಭಾಗದಲ್ಲಿ ನಮ್ಮ ಗ್ರಾಮವಿದ್ದು ಜಿಲ್ಲಾಧಿಕಾರಿಯು 400 ಮತದಾರರಿಲ್ಲ ಎಂಬ ಕಾರಣವನ್ನು ನೀಡಿ ಅಮ್ಮನಲ್ಲೂರು ಗ್ರಾಮಕ್ಕೆ ಮತಗಟ್ಟೆ ಕೇಂದ್ರವನ್ನು ವರ್ಗಾವಣೆ ಮಾಡಲಾಗಿದೆ ಸುಮಾರು ೩ ಕಿಲೋ ಮೀಟರ್ ದೂರವಿರುವ ಅಮ್ಮನಲ್ಲೂರು ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲ ಗ್ರಾಮದ ಹಿರಿಯರು, ಅಂಗವಿಕಲರು ಗ್ರಾಮಕ್ಕೆ ಹೋಗಿ ಮತದಾನ ಮಾಡಿ ಬರಲು ಸಾಧ್ಯವಾಗುವುದಿಲ್ಲ ಕೂಡಲೇ ಕೃಷ್ಣಾಪುರ ಗ್ರಾಮದಲ್ಲಿಯೇ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮದ ಹಿರಿಯ ಮುಖಂಡ ಶ್ರೀನಿವಾಸ್ ಮಾತನಾಡಿ ಕಳೆದ ಎಲ್ಲಾ ಚುನಾವಣೆಯಲ್ಲಿ ನಮ್ಮ ಗ್ರಾಮದಲ್ಲಿಯೇ ಮತದಾನ ಮಾಡಿದ್ದೇವೆ ಹಾಗಾಗಿ ತಮ್ಮ ಗ್ರಾಮದಲ್ಲಿಯೇ ಮತಗಟ್ಟೆ ಸ್ಥಾಪಿಸಬೇಕೆಂದು ಗ್ರಾಮದ ಪ್ರತಿಯೊಬ್ಬರ ಒತ್ತಾಯವಾಗಿದೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಗ್ರಾಮದಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಮಾಡುವುದಕ್ಕೆ ಅವಕಾಶವಿಲ್ಲ ಗ್ರಾಮಸ್ಥರು ಸಹ ಯಾವುದೇ ಪಕ್ಷದ ಪರ ಪ್ರಚಾರದಲ್ಲಿ ಭಾಗವಹಿಸಯವುದಿಲ್ಲ ಗ್ರಾಮದಲ್ಲಿ ಮತಗಟ್ಟೆ ಸ್ಥಾಪಿಸುವರೆಗೂ ಮತದಾನ ಮಾಡುವುದಿಲ್ಲ ಎಂದರು

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ರಾಮಚಂದ್ರಪ್ಪ, ಗ್ರಾಮಸ್ಥರಾದ ಮಂಜುನಾಥ್, ಸತೀಶ್ ಕುಮಾರ್, ಲಕ್ಷ್ಮಣ್,ಮುನೇಗೌಡ, ಬತ್ತೇಶ್, ರಾಜಶೇಖರ್, ಕೆಂಪೇಗೌಡ, ವೆಂಕಟಪ್ಪ, ಮುನಿರಾಜು, ನರೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago