ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:
• ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ.
• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು.
• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುವುದು.
• ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ.
• ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
• ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.
• ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂ ಕೋರ್ಟ್ನಲ್ಲಿ ಎಸ್ಎಲ್ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿದೆʼʼ ಎನ್ನುವುದನ್ನು ಗಮನಿಸಬೇಕಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…