ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:

• ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ.

• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು.

• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುವುದು.

• ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ.

• ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

• ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.

• ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂ ಕೋರ್ಟ್‌ನಲ್ಲಿ ಎಸ್ಎಲ್‌ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿದೆʼʼ ಎನ್ನುವುದನ್ನು ಗಮನಿಸಬೇಕಿದೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

10 minutes ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

3 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

8 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

9 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

21 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

21 hours ago