ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:
• ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ.
• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು.
• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುವುದು.
• ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ.
• ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
• ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.
• ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂ ಕೋರ್ಟ್ನಲ್ಲಿ ಎಸ್ಎಲ್ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿದೆʼʼ ಎನ್ನುವುದನ್ನು ಗಮನಿಸಬೇಕಿದೆ.
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…