ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:

• ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ.

• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು.

• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುವುದು.

• ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ.

• ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

• ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.

• ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂ ಕೋರ್ಟ್‌ನಲ್ಲಿ ಎಸ್ಎಲ್‌ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿದೆʼʼ ಎನ್ನುವುದನ್ನು ಗಮನಿಸಬೇಕಿದೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 minutes ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

17 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

18 hours ago