ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:

• ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ.

• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು.

• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುವುದು.

• ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ.

• ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

• ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.

• ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂ ಕೋರ್ಟ್‌ನಲ್ಲಿ ಎಸ್ಎಲ್‌ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿದೆʼʼ ಎನ್ನುವುದನ್ನು ಗಮನಿಸಬೇಕಿದೆ.

Ramesh Babu

Journalist

Recent Posts

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

6 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

7 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago