Categories: ಕೋಲಾರ

ಕೆಂಪೇಗೌಡರು ದೇಶದ ಆಸ್ತಿ- ವಿಶ್ವ ಕಂಡ ದಕ್ಷ, ದೂರದೃಷ್ಠಿಯಳ್ಳ ಆಡಳಿತಗಾರ: ಶಾಸಕ ಕೊತ್ತೂರು ಮಂಜುನಾಥ

ಕೋಲಾರ : ನಾಡಪ್ರಭು ಕೆಂಪೇಗೌಡರು ಒಂದು ಜಾತಿ ಜನಾಂಗಕ್ಕೆ ಸೀಮಿತವಲ್ಲ ಇಡಿ ದೇಶದ ಆಸ್ತಿಯಾಗಿದ್ದು ಅವರ ದೂರದೃಷ್ಟಿಯ ಪರಿಣಾಮವಾಗಿಯೇ ಬೆಂಗಳೂರು ಇವತ್ತು ಬೃಹತಾಕಾರದಲ್ಲಿ ಬೆಳೆದು ವಿಶ್ವ ಮಟ್ಟದಲ್ಲಿ ಸ್ಥಾನವನ್ನು ಪಡೆದು ಕಂಗೊಳಿಸುತ್ತಿದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ಸಾರಿಗೆ ಡಿಪೋನಲ್ಲಿ ಕೆ.ಎಸ್.ಆರ್.ಟಿ.ಸಿಯ ಕೆಂಪೇಗೌಡ ನೌಕರರ ಸಂಘದಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿಶ್ವದ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ನಿರ್ಮಾಣಕ್ಕೆ ನಾಡಪ್ರಭು ಕೆಂಪೇಗೌಡ ಪಾತ್ರ ಬಹುಮುಖ್ಯವಾಗಿದೆ ಅವರು ಮುಂದಿನ ನೂರು ವರ್ಷಗಳ ದೂರದೃಷ್ಟಿಯನ್ನು ಹೊಂದಿದ್ದ ಆಡಳಿತಗಾರರಾಗಿದ್ದು ಅವರ ಆಡಳಿತ ವೈಖರಿ ಇಂದಿಗೂ ಮಾದರಿಯಾಗಿದೆ ಜೊತೆಗೆ ಇವತ್ತಿನ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಅವರ ಆದರ್ಶವಾಗಬೇಕಾಗಿದೆ ಎಂದರು.

ಕೆಂಪೇಗೌಡರು ಬೆಂಗಳೂರಿನಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಕೈಗಾರಿಕೆಗಳೆ ಜಾಗವನ್ನು ಗುರುತಿಸಿದ್ದರು ಪ್ರತಿಯೊಂದು ಹಂತದಲ್ಲೂ ಜನಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ ಅವರ ಕೆಲಸಗಳು ಇಂದಿಗೂ ಮಾದರಿಯಾಗಿದೆ. ಅತ್ಯುತ್ತಮ ಆಡಳಿತಗಾರರಾಗಿದ್ದ ಕೆಂಪೇಗೌಡರು ಅಂದಿನ ಕಾಲದಲ್ಲಿ ಆಡಳಿತದ ಸೂತ್ರಗಳನ್ನು ರೂಪಿಸಿ ಅದರ ಮೂಲಕ ಪ್ರಾಮಾಣಿಕವಾಗಿ ಮುನ್ನಡೆಯುವಂತೆ ಮಾಡಿದ್ದು ಇಂದಿಗೂ ಇತಿಹಾಸ ಪುಟಗಳಿಂದ ತಿಳಿಯಬಹುದಾಗಿದೆ. ಕೆಂಪೇಗೌಡರು ಅಂದಿನ ಕಾಲದಲ್ಲಿಯೇ ಕೆರೆ ಕಟ್ಟೆ, ನೈರ್ಮಲ್ಯಕ್ಕೆ ಪ್ರಾಧ್ಯಾನತೆ, ಕಟ್ಟಡಗಳ ನಿರ್ಮಾಣ, ಗೋಪುರಗಳ ಮೂಲಕ ಗಡಿಗಳನ್ನು ಗುರುತಿಸುವುದು ಸೇರಿದಂತೆ ಇನ್ನಿತರ ಮಹತ್ವ ಕಾರ್ಯಗಳನ್ನು ಮಾಡಿದ್ದು ವಿಶ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಇವತ್ತು ಸಂವಿಧಾನದಿಂದ ಸಮಾಜಿಕ ನ್ಯಾಯ ಸಿಗುತ್ತಿದೆ ಆದರೆ ಕೆಂಪೇಗೌಡರು ಅವತ್ತೇ ಎಲ್ಲಾ ಸಮುದಾಯಗಳ ಏಳಿಗೆಗಾಗಿ ಸಾಮಾಜಿಕ ನ್ಯಾಯವನ್ನು ಕೊಡಿಸಿದ್ದಾರೆ ಒಕ್ಕಲಿಗ ಸಮುದಾಯವು ಎಲ್ಲಾ ಜಾತಿ ಜನಾಂಗವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವ ಸಮುದಾಯವಾಗಿದೆ ಸರ್ಕಾರಗಳು ಕೆಂಪೇಗೌಡರ ನೆನಪಿಗಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಅವರ ಹೆಸರನ್ನು ಇಟ್ಟಿದ್ದಾರೆ ಜೊತೆಗೆ 108 ಎತ್ತರದ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಅವರ ಮಾರ್ಗದರ್ಶನದಲ್ಲಿ ಗೌರವಯುತವಾಗಿ ನಾವು ಎಲ್ಲರೂ ನಡೆಯಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಕೆಂಪೇಗೌಡರಿಂದ ಅನುಕೂಲ ಪಡೆಯದೇ ಇರುವ ಸಮುದಾಯವಿಲ್ಲ ಎಲ್ಲಾ ಸಮುದಾಗಳಿಗೆ ವ್ಯಾಪಾರ ವ್ಯಹಿವಾಟಿಗೆ ಅನುಕೂಲವಾಗಲು ಜಾಗವನ್ನು ಗುರುತಿಸಿದ್ದಾರೆ ಕೃಷಿ, ವ್ಯಾಪಾರ, ಕಾರ್ಮಿಕರ ಮಧ್ಯೆ ಸ್ನೇಹದ ಮನೋಭಾವವನ್ನು ಬೆಳೆಸುವಂತೆ ಕೆಂಪೇಗೌಡರ ಹಾದಿಯಲ್ಲಿ ಸಾರಿಗೆ ನೌಕರರು ನಡೆಯುತ್ತಿರುವುದು ಅಭಿನಂದನಿಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಕೆ.ವಿ ಶಂಕರಪ್ಪ, ಗೌರವ ಅಧ್ಯಕ್ಷ ಬಿಸಪ್ಪಗೌಡ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ವೈ.ಶಿವಕುಮಾರ್, ಕೆ.ಎಸ್.ಆರ್.ಟಿ.ಸಿ ಕೆಂಪೇಗೌಡ ನೌಕರರ ಸಂಘದ ಅಧ್ಯಕ್ಷ ಉಪ್ಪುಕಂಟೆ ಮುರಳಿ, ಉಪಾಧ್ಯಕ್ಷ ಸತೀಶ್, ಪ್ರಧಾನ ಕಾರ್ಯದರ್ಶಿ ವೆಂಕಟಾಚಲಪತಿ, ಅಬ್ಬಣಿ ಸೊಣ್ಣಪ್ಪ, ಮುಂತಾದವರು ಇದ್ದರು,

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

4 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

10 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

12 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago