ಕೋಲಾರ : ನಾಡಪ್ರಭು ಕೆಂಪೇಗೌಡರು ಒಂದು ಜಾತಿ ಜನಾಂಗಕ್ಕೆ ಸೀಮಿತವಲ್ಲ ಇಡಿ ದೇಶದ ಆಸ್ತಿಯಾಗಿದ್ದು ಅವರ ದೂರದೃಷ್ಟಿಯ ಪರಿಣಾಮವಾಗಿಯೇ ಬೆಂಗಳೂರು ಇವತ್ತು ಬೃಹತಾಕಾರದಲ್ಲಿ ಬೆಳೆದು ವಿಶ್ವ ಮಟ್ಟದಲ್ಲಿ ಸ್ಥಾನವನ್ನು ಪಡೆದು ಕಂಗೊಳಿಸುತ್ತಿದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದ ಸಾರಿಗೆ ಡಿಪೋನಲ್ಲಿ ಕೆ.ಎಸ್.ಆರ್.ಟಿ.ಸಿಯ ಕೆಂಪೇಗೌಡ ನೌಕರರ ಸಂಘದಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿಶ್ವದ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ನಿರ್ಮಾಣಕ್ಕೆ ನಾಡಪ್ರಭು ಕೆಂಪೇಗೌಡ ಪಾತ್ರ ಬಹುಮುಖ್ಯವಾಗಿದೆ ಅವರು ಮುಂದಿನ ನೂರು ವರ್ಷಗಳ ದೂರದೃಷ್ಟಿಯನ್ನು ಹೊಂದಿದ್ದ ಆಡಳಿತಗಾರರಾಗಿದ್ದು ಅವರ ಆಡಳಿತ ವೈಖರಿ ಇಂದಿಗೂ ಮಾದರಿಯಾಗಿದೆ ಜೊತೆಗೆ ಇವತ್ತಿನ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಅವರ ಆದರ್ಶವಾಗಬೇಕಾಗಿದೆ ಎಂದರು.
ಕೆಂಪೇಗೌಡರು ಬೆಂಗಳೂರಿನಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಕೈಗಾರಿಕೆಗಳೆ ಜಾಗವನ್ನು ಗುರುತಿಸಿದ್ದರು ಪ್ರತಿಯೊಂದು ಹಂತದಲ್ಲೂ ಜನಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ ಅವರ ಕೆಲಸಗಳು ಇಂದಿಗೂ ಮಾದರಿಯಾಗಿದೆ. ಅತ್ಯುತ್ತಮ ಆಡಳಿತಗಾರರಾಗಿದ್ದ ಕೆಂಪೇಗೌಡರು ಅಂದಿನ ಕಾಲದಲ್ಲಿ ಆಡಳಿತದ ಸೂತ್ರಗಳನ್ನು ರೂಪಿಸಿ ಅದರ ಮೂಲಕ ಪ್ರಾಮಾಣಿಕವಾಗಿ ಮುನ್ನಡೆಯುವಂತೆ ಮಾಡಿದ್ದು ಇಂದಿಗೂ ಇತಿಹಾಸ ಪುಟಗಳಿಂದ ತಿಳಿಯಬಹುದಾಗಿದೆ. ಕೆಂಪೇಗೌಡರು ಅಂದಿನ ಕಾಲದಲ್ಲಿಯೇ ಕೆರೆ ಕಟ್ಟೆ, ನೈರ್ಮಲ್ಯಕ್ಕೆ ಪ್ರಾಧ್ಯಾನತೆ, ಕಟ್ಟಡಗಳ ನಿರ್ಮಾಣ, ಗೋಪುರಗಳ ಮೂಲಕ ಗಡಿಗಳನ್ನು ಗುರುತಿಸುವುದು ಸೇರಿದಂತೆ ಇನ್ನಿತರ ಮಹತ್ವ ಕಾರ್ಯಗಳನ್ನು ಮಾಡಿದ್ದು ವಿಶ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಇವತ್ತು ಸಂವಿಧಾನದಿಂದ ಸಮಾಜಿಕ ನ್ಯಾಯ ಸಿಗುತ್ತಿದೆ ಆದರೆ ಕೆಂಪೇಗೌಡರು ಅವತ್ತೇ ಎಲ್ಲಾ ಸಮುದಾಯಗಳ ಏಳಿಗೆಗಾಗಿ ಸಾಮಾಜಿಕ ನ್ಯಾಯವನ್ನು ಕೊಡಿಸಿದ್ದಾರೆ ಒಕ್ಕಲಿಗ ಸಮುದಾಯವು ಎಲ್ಲಾ ಜಾತಿ ಜನಾಂಗವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವ ಸಮುದಾಯವಾಗಿದೆ ಸರ್ಕಾರಗಳು ಕೆಂಪೇಗೌಡರ ನೆನಪಿಗಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಅವರ ಹೆಸರನ್ನು ಇಟ್ಟಿದ್ದಾರೆ ಜೊತೆಗೆ 108 ಎತ್ತರದ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಅವರ ಮಾರ್ಗದರ್ಶನದಲ್ಲಿ ಗೌರವಯುತವಾಗಿ ನಾವು ಎಲ್ಲರೂ ನಡೆಯಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಕೆಂಪೇಗೌಡರಿಂದ ಅನುಕೂಲ ಪಡೆಯದೇ ಇರುವ ಸಮುದಾಯವಿಲ್ಲ ಎಲ್ಲಾ ಸಮುದಾಗಳಿಗೆ ವ್ಯಾಪಾರ ವ್ಯಹಿವಾಟಿಗೆ ಅನುಕೂಲವಾಗಲು ಜಾಗವನ್ನು ಗುರುತಿಸಿದ್ದಾರೆ ಕೃಷಿ, ವ್ಯಾಪಾರ, ಕಾರ್ಮಿಕರ ಮಧ್ಯೆ ಸ್ನೇಹದ ಮನೋಭಾವವನ್ನು ಬೆಳೆಸುವಂತೆ ಕೆಂಪೇಗೌಡರ ಹಾದಿಯಲ್ಲಿ ಸಾರಿಗೆ ನೌಕರರು ನಡೆಯುತ್ತಿರುವುದು ಅಭಿನಂದನಿಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಕೆ.ವಿ ಶಂಕರಪ್ಪ, ಗೌರವ ಅಧ್ಯಕ್ಷ ಬಿಸಪ್ಪಗೌಡ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ವೈ.ಶಿವಕುಮಾರ್, ಕೆ.ಎಸ್.ಆರ್.ಟಿ.ಸಿ ಕೆಂಪೇಗೌಡ ನೌಕರರ ಸಂಘದ ಅಧ್ಯಕ್ಷ ಉಪ್ಪುಕಂಟೆ ಮುರಳಿ, ಉಪಾಧ್ಯಕ್ಷ ಸತೀಶ್, ಪ್ರಧಾನ ಕಾರ್ಯದರ್ಶಿ ವೆಂಕಟಾಚಲಪತಿ, ಅಬ್ಬಣಿ ಸೊಣ್ಣಪ್ಪ, ಮುಂತಾದವರು ಇದ್ದರು,
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…