ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭವಾದಾಗಿನಿಂದ ಕೈಗಾರಿಕೆಗಳು ಹೆಚ್ಚಾಗಿ ಬೆಳೆಯುತ್ತಿದೆ, ಕೃಷಿ ಭೂಮಿ ಕಡಿಮೆ ಆಗುತ್ತಿದೆ ಈ ನಿಟ್ಟಿನಲ್ಲಿ ರೈತರ ಮಕ್ಕಳಿಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ನಡೆಸಲಾಗುವುದು ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಟ್ಟು ಕೊಂಡು ಕೆರೆಗಳು, ದೇವಸ್ಥಾನಗಳು, ಪೇಟೆಗಳನ್ನು ನಿರ್ಮಿಸಿದರು, ಇಂದು 2 ಕೋಟಿಯಷ್ಟು ಜನ ಬೆಂಗಳೂರಲ್ಲಿ ವಾಸಿಸುತ್ತಿದ್ದಾರೆ. ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಭಿವೃದ್ಧಿ, ಇನ್ನಿತರ ಕ್ಷೇತ್ರಗಳಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಬೆಂಗಳೂರನ್ನು ವಿಶ್ವವಿಖ್ಯಾತಿಯನ್ನಾಗಿ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವಸಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…