ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭವಾದಾಗಿನಿಂದ ಕೈಗಾರಿಕೆಗಳು ಹೆಚ್ಚಾಗಿ ಬೆಳೆಯುತ್ತಿದೆ, ಕೃಷಿ ಭೂಮಿ ಕಡಿಮೆ ಆಗುತ್ತಿದೆ ಈ ನಿಟ್ಟಿನಲ್ಲಿ ರೈತರ ಮಕ್ಕಳಿಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ನಡೆಸಲಾಗುವುದು ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಟ್ಟು ಕೊಂಡು ಕೆರೆಗಳು, ದೇವಸ್ಥಾನಗಳು, ಪೇಟೆಗಳನ್ನು ನಿರ್ಮಿಸಿದರು, ಇಂದು 2 ಕೋಟಿಯಷ್ಟು ಜನ ಬೆಂಗಳೂರಲ್ಲಿ ವಾಸಿಸುತ್ತಿದ್ದಾರೆ. ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಭಿವೃದ್ಧಿ, ಇನ್ನಿತರ ಕ್ಷೇತ್ರಗಳಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಬೆಂಗಳೂರನ್ನು ವಿಶ್ವವಿಖ್ಯಾತಿಯನ್ನಾಗಿ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವಸಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…