ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭವಾದಾಗಿನಿಂದ ಕೈಗಾರಿಕೆಗಳು ಹೆಚ್ಚಾಗಿ ಬೆಳೆಯುತ್ತಿದೆ, ಕೃಷಿ ಭೂಮಿ ಕಡಿಮೆ ಆಗುತ್ತಿದೆ ಈ ನಿಟ್ಟಿನಲ್ಲಿ ರೈತರ ಮಕ್ಕಳಿಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ನಡೆಸಲಾಗುವುದು ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಟ್ಟು ಕೊಂಡು ಕೆರೆಗಳು, ದೇವಸ್ಥಾನಗಳು, ಪೇಟೆಗಳನ್ನು ನಿರ್ಮಿಸಿದರು, ಇಂದು 2 ಕೋಟಿಯಷ್ಟು ಜನ ಬೆಂಗಳೂರಲ್ಲಿ ವಾಸಿಸುತ್ತಿದ್ದಾರೆ. ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಭಿವೃದ್ಧಿ, ಇನ್ನಿತರ ಕ್ಷೇತ್ರಗಳಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಬೆಂಗಳೂರನ್ನು ವಿಶ್ವವಿಖ್ಯಾತಿಯನ್ನಾಗಿ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವಸಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…