ಕೆಂಪೇಗೌಡರ ಆಡಳಿತ ಕಾರ್ಯವೈಖರಿ, ದೂರದೃಷ್ಟಿ ನಮ್ಮೆಲ್ಲರಿಗೂ ಮಾರ್ಗದರ್ಶಕ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಬೆಂಗಳೂರು ಇಂದು ವಿಶ್ವದಲ್ಲೇ ಹೆಸರು ಗಳಿಸಲು ಕೆಂಪೇಗೌಡರ ಕಾರ್ಯವೈಖರಿ ಎಲ್ಲರಿಗೂ ಮಾದರಿ. ದೇವನಹಳ್ಳಿಯಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಒಂದು ಸಂಸ್ಥೆ ನಿರ್ಮಿಸಿ ಕೆಂಪೇಗೌಡರ ಇತಿಹಾಸ, ಅಭಿವೃದ್ಧಿ ಕಾರ್ಯಗಳು, ಆದರ್ಶಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.

ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭವಾದಾಗಿನಿಂದ ಕೈಗಾರಿಕೆಗಳು ಹೆಚ್ಚಾಗಿ ಬೆಳೆಯುತ್ತಿದೆ, ಕೃಷಿ ಭೂಮಿ ಕಡಿಮೆ ಆಗುತ್ತಿದೆ ಈ ನಿಟ್ಟಿನಲ್ಲಿ ರೈತರ ಮಕ್ಕಳಿಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ನಡೆಸಲಾಗುವುದು ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಟ್ಟು ಕೊಂಡು ಕೆರೆಗಳು, ದೇವಸ್ಥಾನಗಳು, ಪೇಟೆಗಳನ್ನು ನಿರ್ಮಿಸಿದರು, ಇಂದು 2 ಕೋಟಿಯಷ್ಟು ಜನ ಬೆಂಗಳೂರಲ್ಲಿ ವಾಸಿಸುತ್ತಿದ್ದಾರೆ. ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಭಿವೃದ್ಧಿ, ಇನ್ನಿತರ ಕ್ಷೇತ್ರಗಳಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಬೆಂಗಳೂರನ್ನು ವಿಶ್ವವಿಖ್ಯಾತಿಯನ್ನಾಗಿ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕು ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ “ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ”ಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ದೇವನಹಳ್ಳಿಯ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯದಿಂದ ಡಾ. ಬಿ.ಆರ್.ಅಂಬೇಡ್ಕರ್ ಭವನದವರೆಗೆ ಹಮ್ಮಿಕೊಳ್ಳಲಾದ ಕೆಂಪೇಗೌಡ ಅವರ ಭಾವಚಿತ್ರ ಹೊತ್ತ ರಥ ಸಂಚಾರಕ್ಕೆ ಹಾಗೂ ಕಲಾತಂಡಗಳ ಮೆರವಣಿಗೆ ನಡೆಯಿತು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವಸಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 hour ago

No Deposit Reward Casino Site List: Every Little Thing You Required to Know

When it involves on-line gambling enterpris padişahbet günceles, among one of the most tempting deals…

7 hours ago

Instant Play Casino

Instant play casinos allow you to play casino games online without installing any software. These…

17 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

19 hours ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

21 hours ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

21 hours ago