ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡರ ಹೆಸರನ್ನು ಶಾಶ್ವತವಾಗಿ ಉಳಿಸುವ ಉದ್ದೇಶದಿಂದ ಸರ್ಕಾರ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ ತಿಳಿಸಿದರು.

ಮಾಗಡಿ ಸಮೀಪ ಕೆಂಪೇಗೌಡರ ಆಯ್ಕೆ ಸ್ಥಳದಲ್ಲಿ 10 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈಗಾಗಲೇ 5.5 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಉಳಿದ ಭೂಸ್ವಾಧೀನ ಪ್ರಕ್ರಿಯೆಯೂ ಪ್ರಗತಿಯಲ್ಲಿದ್ದು, ಮಾಗಡಿಯಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಟೌನ್ ಪ್ಲಾನಿಂಗ್ ಅಭಿವೃದ್ಧಿಗೆ ಸೂಚನೆ ನೀಡಲಾಗಿದೆ ಎಂದರು.

ಕೆಂಪೇಗೌಡರ ಹೆಸರಿನಲ್ಲಿ ಕಾಲೇಜು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದ್ದು, ಕೆಂಪೇಗೌಡ ಭವನದ ಹೊಸ ಬ್ಲೂಪ್ರಿಂಟ್‌ನ್ನು ಸಿದ್ಧಪಡಿಸಲಾಗಿದ್ದು, ಅದನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಅವರ ಪ್ರತಿಮೆಯನ್ನು ಇನ್ನಷ್ಟು ಆಕರ್ಷಕವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಜೊತೆಗೆ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಕೆಂಪೇಗೌಡರ ಪುತ್ಥಳಿಗಳನ್ನು ನಿರ್ಮಿಸುವ ಕುರಿತು ಚಿಂತನೆ ನಡೆದಿದ್ದು, ಈ ಕಾರ್ಯದ ಜವಾಬ್ದಾರಿಯನ್ನು ಸಚಿವ ಕೃಷ್ಣ ಬೈರೇಗೌಡ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು.

ಇನ್ನು ಮುಂದೆ ಕೆಂಪೇಗೌಡ ಜಯಂತಿಯನ್ನು ಕೇವಲ ವಿಧಾನಸೌಧಕ್ಕೆ ಸೀಮಿತಗೊಳಿಸದೇ, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿವರ್ಷ ಒಂದೊಂದು ಕ್ಷೇತ್ರದಲ್ಲಿ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದರು.

ನಗರದ ಮೂಲಸೌಕರ್ಯ ಅಭಿವೃದ್ಧಿಯ ಕುರಿತು ಮಾತನಾಡಿದ ಮುಖ್ಯಮಂತ್ರಿ, ಮುಂದಿನ ಎರಡು ವರ್ಷಗಳಲ್ಲಿ ಮೆಟ್ರೋ ವಿಸ್ತರಣೆಗೆ ಸರ್ಕಾರ ವಿಶೇಷ ಆದ್ಯತೆ ನೀಡಲಿದ್ದು, ಸುಮಾರು 500 ಕಿಲೋಮೀಟರ್ ಮೆಟ್ರೋ ಜಾಲ ವಿಸ್ತರಣೆಯ ಗುರಿ ಹೊಂದಲಾಗಿದೆ. ಸರ್ಕಾರದ ಅವಧಿಯಲ್ಲೇ ಈ ಯೋಜನೆಗಳನ್ನು ಸಾಕಾರಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

ಇದೇ ವೇಳೆ ಬಿಡದಿ ಕುರಿತ ಪ್ರಶ್ನೆಯನ್ನು ಮಾಧ್ಯಮಗಳು ಕೇಳಿದಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ ನಿರ್ಗಮಿಸಿದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

15 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 days ago