ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡರ ಹೆಸರನ್ನು ಶಾಶ್ವತವಾಗಿ ಉಳಿಸುವ ಉದ್ದೇಶದಿಂದ ಸರ್ಕಾರ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ ತಿಳಿಸಿದರು.
ಮಾಗಡಿ ಸಮೀಪ ಕೆಂಪೇಗೌಡರ ಆಯ್ಕೆ ಸ್ಥಳದಲ್ಲಿ 10 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈಗಾಗಲೇ 5.5 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಉಳಿದ ಭೂಸ್ವಾಧೀನ ಪ್ರಕ್ರಿಯೆಯೂ ಪ್ರಗತಿಯಲ್ಲಿದ್ದು, ಮಾಗಡಿಯಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಟೌನ್ ಪ್ಲಾನಿಂಗ್ ಅಭಿವೃದ್ಧಿಗೆ ಸೂಚನೆ ನೀಡಲಾಗಿದೆ ಎಂದರು.
ಕೆಂಪೇಗೌಡರ ಹೆಸರಿನಲ್ಲಿ ಕಾಲೇಜು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದ್ದು, ಕೆಂಪೇಗೌಡ ಭವನದ ಹೊಸ ಬ್ಲೂಪ್ರಿಂಟ್ನ್ನು ಸಿದ್ಧಪಡಿಸಲಾಗಿದ್ದು, ಅದನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಅವರ ಪ್ರತಿಮೆಯನ್ನು ಇನ್ನಷ್ಟು ಆಕರ್ಷಕವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಜೊತೆಗೆ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಕೆಂಪೇಗೌಡರ ಪುತ್ಥಳಿಗಳನ್ನು ನಿರ್ಮಿಸುವ ಕುರಿತು ಚಿಂತನೆ ನಡೆದಿದ್ದು, ಈ ಕಾರ್ಯದ ಜವಾಬ್ದಾರಿಯನ್ನು ಸಚಿವ ಕೃಷ್ಣ ಬೈರೇಗೌಡ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು.
ಇನ್ನು ಮುಂದೆ ಕೆಂಪೇಗೌಡ ಜಯಂತಿಯನ್ನು ಕೇವಲ ವಿಧಾನಸೌಧಕ್ಕೆ ಸೀಮಿತಗೊಳಿಸದೇ, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿವರ್ಷ ಒಂದೊಂದು ಕ್ಷೇತ್ರದಲ್ಲಿ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದರು.
ನಗರದ ಮೂಲಸೌಕರ್ಯ ಅಭಿವೃದ್ಧಿಯ ಕುರಿತು ಮಾತನಾಡಿದ ಮುಖ್ಯಮಂತ್ರಿ, ಮುಂದಿನ ಎರಡು ವರ್ಷಗಳಲ್ಲಿ ಮೆಟ್ರೋ ವಿಸ್ತರಣೆಗೆ ಸರ್ಕಾರ ವಿಶೇಷ ಆದ್ಯತೆ ನೀಡಲಿದ್ದು, ಸುಮಾರು 500 ಕಿಲೋಮೀಟರ್ ಮೆಟ್ರೋ ಜಾಲ ವಿಸ್ತರಣೆಯ ಗುರಿ ಹೊಂದಲಾಗಿದೆ. ಸರ್ಕಾರದ ಅವಧಿಯಲ್ಲೇ ಈ ಯೋಜನೆಗಳನ್ನು ಸಾಕಾರಗೊಳಿಸಲು ಪ್ರಯತ್ನಿಸಲಾಗುವುದು ಎಂದರು.
ಇದೇ ವೇಳೆ ಬಿಡದಿ ಕುರಿತ ಪ್ರಶ್ನೆಯನ್ನು ಮಾಧ್ಯಮಗಳು ಕೇಳಿದಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ ನಿರ್ಗಮಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…