ಕೆಂಪೇಗೌಡ ಏರ್ ಪೊರ್ಟ್ ನಲ್ಲಿ NCB ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಲಾಗಿದ್ದು, ಬರೋಬ್ಬರಿ 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆಪಡೆಯಲಾಗಿದೆ.
ಕಾರ್ಯಾಚರಣೆ ವೇಳೆ ಮೂವರ ಆರೋಪಿಗಳ ಬಂಧಿಸಲಾಗಿದೆ. 45 ಕೆಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಲಾಗಿದೆ.
ಆರಂಭದಲ್ಲಿ ಥೈಲ್ಯಾಂಡ್ ನಿಂದ ಡ್ರಗ್ಸ್ ಸಾಗಾಟ ಮಾಹಿತಿ ಕಲೆ ಹಾಕಿದ್ದ ಅಧಿಕಾರಿಗಳು. ಈ ಕಾರ್ಯಾಚರಣೆ ವೇಳೆ ಕೊಲಂಬೋದಿಂದ ಬರ್ತಿದ್ದ ಇಬ್ಬರು ಆರೋಪಿಗಳು ವಶಕ್ಕೆ ಪಡೆದು, ಇಬ್ಬರು ಆರೋಪಿಗಳಿಂದ 31 ಕೆಜಿ ಹೈಡ್ರೋಗಾಂಜಾ ಮತ್ತು 4 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಲಾಗಿದೆ.
ಇಬ್ಬರ ವಿಚಾರಣೆಯಲ್ಲಿ ಮತ್ತೊಬ್ಬ ಆರೋಪಿ ನೆಕ್ಸ್ಟ್ ಫ್ಲೈಟ್ ಗೆ ಶ್ರೀಲಂಕಾದಿಂದ ಬರುವ ಮಾಹಿತಿ ಆಧಾರದ ಮೇಲೆ. ಖಚಿತ ಮಾಹಿತಿ ಪಡೆದು ಕಾದು ಇನ್ನೋರ್ವ ಶ್ರೀಲಂಕಾ ಪ್ರಜೆಯನ್ನ ಎನ್ ಸಿ ಬಿ. ಬಂಧಿಸಿದೆ.
ಶ್ರೀಲಂಕಾದ ಹ್ಯಾಂಡ್ಲರ್ ನಿಂದ 14 ಕೆ ಜಿ ಹೈಡ್ರೋಗಾಂಜಾ ಮತ್ತು 2 ಕೆಜಿ ಅಣಬೆ ವಶಕ್ಕೆ ಪಡೆಯಲಾಗಿದೆ. 250 ಫುಡ್ ಟಿನ್ ಗಳಲ್ಲಿ ಡ್ರಗ್ಸ್ ಸೀಲ್ ಮಾಡಿಕೊಂಡು ಬಂದಿದ್ದ ಆರೋಪಿಗಳು.
ಈ ವರ್ಷ ಎನ್ ಸಿ ಬಿ ಯಿಂದ 18 ಕೇಸ್ ಗಳಲ್ಲಿ 100 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ ಮಾಡಲಾಗಿದೆ.
18 ಪ್ರಕರಣಗಳಲ್ಲಿ ಕೇರಳ, ರಾಜಸ್ಥಾನ, ಗುಜರಾತ್, ಮಾಹಾರಾಷ್ಟ್ರ ದಲ್ಲಿ ಗಾಂಜಾ ದಂಧೆ ನಡೆಸ್ತಿದ್ದ 45 ಆರೋಪಿಗಳನ್ನ ಬಂಧಿಸಲಾಗಿದೆ.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…