ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಿತ್ತು. ಇಲ್ಲಿಗೆ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಇಂದು ಒಂದು ಕ್ಯಾಂಟೀನನ್ನು ಉದ್ಘಾಟಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಒಟ್ಟು 2 ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿದೆ ಎಂದರು.

ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ 2-3 ಸಭೆಗಳನ್ನು ನಡೆಸಿದ್ದು, ಎಷ್ಟೇ ಹಣ ವೆಚ್ಚವಾದರೂ ಟ್ಯಾಂಕರ್ ಮೂಲಕ, ಹೊಸ ಕೊಳವೆಬಾವಿಗಳಿರಬಹುದು ಅಥವಾ ಕಾವೇರಿ ನೀರನ್ನಾದರೂ ಕೊಡುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು , ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

6 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

10 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

10 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

18 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago