ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರು ವಿಮಾನ ನಿಲ್ದಾಣದ ವತಿಯಿಂದ ಪ್ರತಿವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸುತ್ತಿರುವುದು ಶ್ಲಾಘನೀಯ. ಆಂಗ್ಲಭಾಷೆಯಷ್ಟೇ ಅಲ್ಲ, ಕನ್ನಡಕ್ಕೂ ಹೆಚ್ಚಿನ ಆದ್ಯತೆಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೊಡಲಾಗುತ್ತಿದೆ ಎಂಬುದನ್ನು ಇದು ಒತ್ತಿ ಹೇಳುತ್ತದೆ, ಅಷ್ಟೇ ಅಲ್ಲದೆ, ನಮ್ಮ ಕರ್ನಾಟಕದ ಪರಂಪರೆಯನ್ನು ಜಾಗತಿಕವಾಗಿ ಪಸರಿಸಲು ಕಲಾಪ್ರದರ್ಶನ ಏರ್ಪಡಿಸಿರುವುದು ಕೂಡ ಉತ್ತಮ ಕೆಲಸ ಎಂದು ಹೇಳಿದರು.
ಎರಡು ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕರ್ನಾಟಕದ ಸಾಂಪ್ರದಾಯಿಕ ಜಾನಪದ ಪ್ರಕಾರಗಳನ್ನು ಒಟ್ಟುಗೂಡಿಸುವ ಅದ್ಭುತ ನೃತ್ಯ ಪ್ರದರ್ಶನ, ವರ್ಣರಂಜಿತ ವೇಷಭೂಷಣ, ಸಂಗೀತ ಮತ್ತು ಕ್ರಿಯಾತ್ಮಕ ಚಲನೆಗಳು ಪ್ರೇಕ್ಷಕರನ್ನು ಆಕರ್ಷಿಸಿತು. ಇದಷ್ಟೇ ಅಲ್ಲದೆ, ಮಹಿಳಾ ಸ್ವ ಉದ್ಯೋಗಿಗಳೇ ನಿರ್ಮಿಸಿದ ಉಡುಪುಗಳ ಮಾರಾಟಕ್ಕೂ ಮಳಿಗೆಗಳನ್ನು ತೆರೆಯಲು ಟರ್ಮಿನಲ್ 2 ಮುಂಭಾಗ ಅವಕಾಶ ಕಲ್ಪಿಸಿಕೊಡಲಾಗಿತ್ತು. ಈ ಮಳಿಗೆಗಳು ಮೈಸೂರು ರೇಷ್ಮೆ, ಉಡುಪಿ ಸೀರೆಗಳು, ಬಿದ್ರಿವೇರ್ ಮತ್ತು ಇಳಕಲ್ ಸೀರೆಗಳಂತಹ ಸೊಗಸಾದ ವಸ್ತುಗಳನ್ನು ಪ್ರದರ್ಶನ ಹಾಗೂ ಮಾರಾಟ ಮಾಡಲಾಯಿತು. ಪ್ರವಾಸಿಗರಿಗೆ ಕರ್ನಾಟಕವನ್ನು ವ್ಯಾಖ್ಯಾನಿಸುವ ಕರಕುಶಲತೆ ಮತ್ತು ಸಂಪ್ರದಾಯದ ಬಗ್ಗೆ ಕಣ್ತುಂಬಿಕೊಳ್ಳಲು ಅವಕಾಶ ದೊರೆಯಿತು.
ಈ ಆಚರಣೆಯ ಮೂಲಕ, BLR ವಿಮಾನ ನಿಲ್ದಾಣವು ಕರ್ನಾಟಕದ ರೋಮಾಂಚಕ ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರಚಾರ ಮಾಡುವ ತನ್ನ ಬದ್ಧತೆಯನ್ನು ಎತ್ತಿ ತೋರಿಸಿತು.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…