ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರು ವಿಮಾನ ನಿಲ್ದಾಣದ ವತಿಯಿಂದ ಪ್ರತಿವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸುತ್ತಿರುವುದು ಶ್ಲಾಘನೀಯ. ಆಂಗ್ಲಭಾಷೆಯಷ್ಟೇ ಅಲ್ಲ, ಕನ್ನಡಕ್ಕೂ ಹೆಚ್ಚಿನ ಆದ್ಯತೆಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೊಡಲಾಗುತ್ತಿದೆ ಎಂಬುದನ್ನು ಇದು ಒತ್ತಿ ಹೇಳುತ್ತದೆ, ಅಷ್ಟೇ ಅಲ್ಲದೆ, ನಮ್ಮ ಕರ್ನಾಟಕದ ಪರಂಪರೆಯನ್ನು ಜಾಗತಿಕವಾಗಿ ಪಸರಿಸಲು ಕಲಾಪ್ರದರ್ಶನ ಏರ್ಪಡಿಸಿರುವುದು ಕೂಡ ಉತ್ತಮ ಕೆಲಸ ಎಂದು ಹೇಳಿದರು.
ಎರಡು ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕರ್ನಾಟಕದ ಸಾಂಪ್ರದಾಯಿಕ ಜಾನಪದ ಪ್ರಕಾರಗಳನ್ನು ಒಟ್ಟುಗೂಡಿಸುವ ಅದ್ಭುತ ನೃತ್ಯ ಪ್ರದರ್ಶನ, ವರ್ಣರಂಜಿತ ವೇಷಭೂಷಣ, ಸಂಗೀತ ಮತ್ತು ಕ್ರಿಯಾತ್ಮಕ ಚಲನೆಗಳು ಪ್ರೇಕ್ಷಕರನ್ನು ಆಕರ್ಷಿಸಿತು. ಇದಷ್ಟೇ ಅಲ್ಲದೆ, ಮಹಿಳಾ ಸ್ವ ಉದ್ಯೋಗಿಗಳೇ ನಿರ್ಮಿಸಿದ ಉಡುಪುಗಳ ಮಾರಾಟಕ್ಕೂ ಮಳಿಗೆಗಳನ್ನು ತೆರೆಯಲು ಟರ್ಮಿನಲ್ 2 ಮುಂಭಾಗ ಅವಕಾಶ ಕಲ್ಪಿಸಿಕೊಡಲಾಗಿತ್ತು. ಈ ಮಳಿಗೆಗಳು ಮೈಸೂರು ರೇಷ್ಮೆ, ಉಡುಪಿ ಸೀರೆಗಳು, ಬಿದ್ರಿವೇರ್ ಮತ್ತು ಇಳಕಲ್ ಸೀರೆಗಳಂತಹ ಸೊಗಸಾದ ವಸ್ತುಗಳನ್ನು ಪ್ರದರ್ಶನ ಹಾಗೂ ಮಾರಾಟ ಮಾಡಲಾಯಿತು. ಪ್ರವಾಸಿಗರಿಗೆ ಕರ್ನಾಟಕವನ್ನು ವ್ಯಾಖ್ಯಾನಿಸುವ ಕರಕುಶಲತೆ ಮತ್ತು ಸಂಪ್ರದಾಯದ ಬಗ್ಗೆ ಕಣ್ತುಂಬಿಕೊಳ್ಳಲು ಅವಕಾಶ ದೊರೆಯಿತು.
ಈ ಆಚರಣೆಯ ಮೂಲಕ, BLR ವಿಮಾನ ನಿಲ್ದಾಣವು ಕರ್ನಾಟಕದ ರೋಮಾಂಚಕ ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರಚಾರ ಮಾಡುವ ತನ್ನ ಬದ್ಧತೆಯನ್ನು ಎತ್ತಿ ತೋರಿಸಿತು.
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…