ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರು ವಿಮಾನ ನಿಲ್ದಾಣದ ವತಿಯಿಂದ ಪ್ರತಿವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸುತ್ತಿರುವುದು ಶ್ಲಾಘನೀಯ. ಆಂಗ್ಲಭಾಷೆಯಷ್ಟೇ ಅಲ್ಲ, ಕನ್ನಡಕ್ಕೂ ಹೆಚ್ಚಿನ ಆದ್ಯತೆಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೊಡಲಾಗುತ್ತಿದೆ ಎಂಬುದನ್ನು ಇದು ಒತ್ತಿ ಹೇಳುತ್ತದೆ, ಅಷ್ಟೇ ಅಲ್ಲದೆ, ನಮ್ಮ ಕರ್ನಾಟಕದ ಪರಂಪರೆಯನ್ನು ಜಾಗತಿಕವಾಗಿ ಪಸರಿಸಲು ಕಲಾಪ್ರದರ್ಶನ ಏರ್ಪಡಿಸಿರುವುದು ಕೂಡ ಉತ್ತಮ ಕೆಲಸ ಎಂದು ಹೇಳಿದರು.

ಎರಡು ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರಮುಖವಾಗಿ ಟರ್ಮಿನಲ್‌2 ಮುಂಭಾಗ ವಿಶೇಷ ಕನ್ನಡ ಚಟುವಟಿಕೆಗಳನ್ನು ನಡೆಸಲಾಯಿತು.

ಕರ್ನಾಟಕದ ಸಾಂಪ್ರದಾಯಿಕ ಜಾನಪದ ಪ್ರಕಾರಗಳನ್ನು ಒಟ್ಟುಗೂಡಿಸುವ ಅದ್ಭುತ ನೃತ್ಯ ಪ್ರದರ್ಶನ, ವರ್ಣರಂಜಿತ ವೇಷಭೂಷಣ, ಸಂಗೀತ ಮತ್ತು ಕ್ರಿಯಾತ್ಮಕ ಚಲನೆಗಳು ಪ್ರೇಕ್ಷಕರನ್ನು ಆಕರ್ಷಿಸಿತು. ಇದಷ್ಟೇ ಅಲ್ಲದೆ, ಮಹಿಳಾ ಸ್ವ ಉದ್ಯೋಗಿಗಳೇ ನಿರ್ಮಿಸಿದ ಉಡುಪುಗಳ ಮಾರಾಟಕ್ಕೂ ಮಳಿಗೆಗಳನ್ನು ತೆರೆಯಲು ಟರ್ಮಿನಲ್‌ 2 ಮುಂಭಾಗ ಅವಕಾಶ ಕಲ್ಪಿಸಿಕೊಡಲಾಗಿತ್ತು. ಈ ಮಳಿಗೆಗಳು ಮೈಸೂರು ರೇಷ್ಮೆ, ಉಡುಪಿ ಸೀರೆಗಳು, ಬಿದ್ರಿವೇರ್ ಮತ್ತು ಇಳಕಲ್ ಸೀರೆಗಳಂತಹ ಸೊಗಸಾದ ವಸ್ತುಗಳನ್ನು ಪ್ರದರ್ಶನ ಹಾಗೂ ಮಾರಾಟ ಮಾಡಲಾಯಿತು. ಪ್ರವಾಸಿಗರಿಗೆ ಕರ್ನಾಟಕವನ್ನು ವ್ಯಾಖ್ಯಾನಿಸುವ ಕರಕುಶಲತೆ ಮತ್ತು ಸಂಪ್ರದಾಯದ ಬಗ್ಗೆ ಕಣ್ತುಂಬಿಕೊಳ್ಳಲು ಅವಕಾಶ ದೊರೆಯಿತು.

ಕಾರ್ಯಕ್ರಮವು ಕುಂಬಾರಿಕೆ, ಚನ್ನಪಟ್ಟಣದ ಆಟಿಕೆ ಚಿತ್ರಕಲೆ, ಬುಟ್ಟಿ ನೇಯ್ಗೆ ಮತ್ತು ಅನೇಕ ಸಂಪ್ರದಾಯತೆಯನ್ನು ಒಳಗೊಂಡಿತ್ತು, ನೇರಪ್ರಸಾರದ ಕಲಾ ಪ್ರದರ್ಶನವು ಜನರನ್ನು ಮನಸೂರೆಗೊಳಿಸಿತು. ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ ಪ್ರಯಾಣಿಕರು ಈ ಎಲ್ಲಾ ಕಲಾ ಪ್ರಕಾರಗಳನ್ನು ಅಚ್ಛರಿಯಿಂದ ಮನಸಾರೆ ಕಣ್ತುಂಬಿಕೊಂಡರು.

ಈ ಆಚರಣೆಯ ಮೂಲಕ, BLR ವಿಮಾನ ನಿಲ್ದಾಣವು ಕರ್ನಾಟಕದ ರೋಮಾಂಚಕ ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರಚಾರ ಮಾಡುವ ತನ್ನ ಬದ್ಧತೆಯನ್ನು ಎತ್ತಿ ತೋರಿಸಿತು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

4 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

7 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

12 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

13 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

13 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

15 hours ago