ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರು ವಿಮಾನ ನಿಲ್ದಾಣದ ವತಿಯಿಂದ ಪ್ರತಿವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸುತ್ತಿರುವುದು ಶ್ಲಾಘನೀಯ. ಆಂಗ್ಲಭಾಷೆಯಷ್ಟೇ ಅಲ್ಲ, ಕನ್ನಡಕ್ಕೂ ಹೆಚ್ಚಿನ ಆದ್ಯತೆಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೊಡಲಾಗುತ್ತಿದೆ ಎಂಬುದನ್ನು ಇದು ಒತ್ತಿ ಹೇಳುತ್ತದೆ, ಅಷ್ಟೇ ಅಲ್ಲದೆ, ನಮ್ಮ ಕರ್ನಾಟಕದ ಪರಂಪರೆಯನ್ನು ಜಾಗತಿಕವಾಗಿ ಪಸರಿಸಲು ಕಲಾಪ್ರದರ್ಶನ ಏರ್ಪಡಿಸಿರುವುದು ಕೂಡ ಉತ್ತಮ ಕೆಲಸ ಎಂದು ಹೇಳಿದರು.
ಎರಡು ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕರ್ನಾಟಕದ ಸಾಂಪ್ರದಾಯಿಕ ಜಾನಪದ ಪ್ರಕಾರಗಳನ್ನು ಒಟ್ಟುಗೂಡಿಸುವ ಅದ್ಭುತ ನೃತ್ಯ ಪ್ರದರ್ಶನ, ವರ್ಣರಂಜಿತ ವೇಷಭೂಷಣ, ಸಂಗೀತ ಮತ್ತು ಕ್ರಿಯಾತ್ಮಕ ಚಲನೆಗಳು ಪ್ರೇಕ್ಷಕರನ್ನು ಆಕರ್ಷಿಸಿತು. ಇದಷ್ಟೇ ಅಲ್ಲದೆ, ಮಹಿಳಾ ಸ್ವ ಉದ್ಯೋಗಿಗಳೇ ನಿರ್ಮಿಸಿದ ಉಡುಪುಗಳ ಮಾರಾಟಕ್ಕೂ ಮಳಿಗೆಗಳನ್ನು ತೆರೆಯಲು ಟರ್ಮಿನಲ್ 2 ಮುಂಭಾಗ ಅವಕಾಶ ಕಲ್ಪಿಸಿಕೊಡಲಾಗಿತ್ತು. ಈ ಮಳಿಗೆಗಳು ಮೈಸೂರು ರೇಷ್ಮೆ, ಉಡುಪಿ ಸೀರೆಗಳು, ಬಿದ್ರಿವೇರ್ ಮತ್ತು ಇಳಕಲ್ ಸೀರೆಗಳಂತಹ ಸೊಗಸಾದ ವಸ್ತುಗಳನ್ನು ಪ್ರದರ್ಶನ ಹಾಗೂ ಮಾರಾಟ ಮಾಡಲಾಯಿತು. ಪ್ರವಾಸಿಗರಿಗೆ ಕರ್ನಾಟಕವನ್ನು ವ್ಯಾಖ್ಯಾನಿಸುವ ಕರಕುಶಲತೆ ಮತ್ತು ಸಂಪ್ರದಾಯದ ಬಗ್ಗೆ ಕಣ್ತುಂಬಿಕೊಳ್ಳಲು ಅವಕಾಶ ದೊರೆಯಿತು.
ಈ ಆಚರಣೆಯ ಮೂಲಕ, BLR ವಿಮಾನ ನಿಲ್ದಾಣವು ಕರ್ನಾಟಕದ ರೋಮಾಂಚಕ ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರಚಾರ ಮಾಡುವ ತನ್ನ ಬದ್ಧತೆಯನ್ನು ಎತ್ತಿ ತೋರಿಸಿತು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…