ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರು ವಿಮಾನ ನಿಲ್ದಾಣದ ವತಿಯಿಂದ ಪ್ರತಿವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸುತ್ತಿರುವುದು ಶ್ಲಾಘನೀಯ. ಆಂಗ್ಲಭಾಷೆಯಷ್ಟೇ ಅಲ್ಲ, ಕನ್ನಡಕ್ಕೂ ಹೆಚ್ಚಿನ ಆದ್ಯತೆಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೊಡಲಾಗುತ್ತಿದೆ ಎಂಬುದನ್ನು ಇದು ಒತ್ತಿ ಹೇಳುತ್ತದೆ, ಅಷ್ಟೇ ಅಲ್ಲದೆ, ನಮ್ಮ ಕರ್ನಾಟಕದ ಪರಂಪರೆಯನ್ನು ಜಾಗತಿಕವಾಗಿ ಪಸರಿಸಲು ಕಲಾಪ್ರದರ್ಶನ ಏರ್ಪಡಿಸಿರುವುದು ಕೂಡ ಉತ್ತಮ ಕೆಲಸ ಎಂದು ಹೇಳಿದರು.

ಎರಡು ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರಮುಖವಾಗಿ ಟರ್ಮಿನಲ್‌2 ಮುಂಭಾಗ ವಿಶೇಷ ಕನ್ನಡ ಚಟುವಟಿಕೆಗಳನ್ನು ನಡೆಸಲಾಯಿತು.

ಕರ್ನಾಟಕದ ಸಾಂಪ್ರದಾಯಿಕ ಜಾನಪದ ಪ್ರಕಾರಗಳನ್ನು ಒಟ್ಟುಗೂಡಿಸುವ ಅದ್ಭುತ ನೃತ್ಯ ಪ್ರದರ್ಶನ, ವರ್ಣರಂಜಿತ ವೇಷಭೂಷಣ, ಸಂಗೀತ ಮತ್ತು ಕ್ರಿಯಾತ್ಮಕ ಚಲನೆಗಳು ಪ್ರೇಕ್ಷಕರನ್ನು ಆಕರ್ಷಿಸಿತು. ಇದಷ್ಟೇ ಅಲ್ಲದೆ, ಮಹಿಳಾ ಸ್ವ ಉದ್ಯೋಗಿಗಳೇ ನಿರ್ಮಿಸಿದ ಉಡುಪುಗಳ ಮಾರಾಟಕ್ಕೂ ಮಳಿಗೆಗಳನ್ನು ತೆರೆಯಲು ಟರ್ಮಿನಲ್‌ 2 ಮುಂಭಾಗ ಅವಕಾಶ ಕಲ್ಪಿಸಿಕೊಡಲಾಗಿತ್ತು. ಈ ಮಳಿಗೆಗಳು ಮೈಸೂರು ರೇಷ್ಮೆ, ಉಡುಪಿ ಸೀರೆಗಳು, ಬಿದ್ರಿವೇರ್ ಮತ್ತು ಇಳಕಲ್ ಸೀರೆಗಳಂತಹ ಸೊಗಸಾದ ವಸ್ತುಗಳನ್ನು ಪ್ರದರ್ಶನ ಹಾಗೂ ಮಾರಾಟ ಮಾಡಲಾಯಿತು. ಪ್ರವಾಸಿಗರಿಗೆ ಕರ್ನಾಟಕವನ್ನು ವ್ಯಾಖ್ಯಾನಿಸುವ ಕರಕುಶಲತೆ ಮತ್ತು ಸಂಪ್ರದಾಯದ ಬಗ್ಗೆ ಕಣ್ತುಂಬಿಕೊಳ್ಳಲು ಅವಕಾಶ ದೊರೆಯಿತು.

ಕಾರ್ಯಕ್ರಮವು ಕುಂಬಾರಿಕೆ, ಚನ್ನಪಟ್ಟಣದ ಆಟಿಕೆ ಚಿತ್ರಕಲೆ, ಬುಟ್ಟಿ ನೇಯ್ಗೆ ಮತ್ತು ಅನೇಕ ಸಂಪ್ರದಾಯತೆಯನ್ನು ಒಳಗೊಂಡಿತ್ತು, ನೇರಪ್ರಸಾರದ ಕಲಾ ಪ್ರದರ್ಶನವು ಜನರನ್ನು ಮನಸೂರೆಗೊಳಿಸಿತು. ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ ಪ್ರಯಾಣಿಕರು ಈ ಎಲ್ಲಾ ಕಲಾ ಪ್ರಕಾರಗಳನ್ನು ಅಚ್ಛರಿಯಿಂದ ಮನಸಾರೆ ಕಣ್ತುಂಬಿಕೊಂಡರು.

ಈ ಆಚರಣೆಯ ಮೂಲಕ, BLR ವಿಮಾನ ನಿಲ್ದಾಣವು ಕರ್ನಾಟಕದ ರೋಮಾಂಚಕ ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರಚಾರ ಮಾಡುವ ತನ್ನ ಬದ್ಧತೆಯನ್ನು ಎತ್ತಿ ತೋರಿಸಿತು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 hour ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

23 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago