ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆ ಕಟ್ಟಿದ ದಸರಾ ಸಂಭ್ರಮ: ಪಟ್ಟದ ಬೊಂಬೆಗಳ ಪ್ರದರ್ಶನ ಮಾಡಿ ನಾಡಿನ‌ ಸಂಸ್ಕೃತಿ ಸಾರಿದ ಏರ್ಪೋರ್ಟ್ ಸಿಬ್ಬಂದಿ

ಎಲ್ಲರ ಚಿತ್ತ ಮೈಸೂರಿನ ದಸರಾ ಸಂಭ್ರಮದತ್ತ. ನಾಡಿನ ಎಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದೆ. ದಸರಾ ಅಂದ ಕೂಡಲೇ ಥಟ್ ಅಂತ ನೆನಪಿಗೆ ಬರೋದು ಬೊಂಬೆಗಳ‌ ಪೂಜೆ. ಹಾಗಾಗಿ ದೇಶ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ನಾಡಿನ ಕಲೆ, ಸಂಸ್ಕೃತಿ, ಈ ನೆಲ, ಜಲದ ಬಗ್ಗೆ ಅರಿವು ಮೂಡಿಸಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೊಂಬೆಗಳ ಪ್ರದರ್ಶನ ಮಾಡಿದೆ.

ಹೌದು, ಹೀಗೆ ಡೊಳ್ಳು‌ ಕುಣಿತಕ್ಕೆ ಭರ್ಜರಿ ಸ್ಟೆಪ್ಸ್ ಹಾಕುತ್ತಿರುವ ಸಿಬ್ಬಂದಿ, ಬೊಂಬೆಗಳ ಮುಂದೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ಪ್ರಯಾಣಿಕರು, ವಿವಿಧ ಕಥೆಗಳನ್ನ ಸಾರುವ ಬೊಂಬೆಗಳ ಪ್ರದರ್ಶನ ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ. ನವರಾತ್ರಿ ಆಚರಣೆ ಹಿನ್ನೆಲೆ ಮನೆಗಳಲ್ಲಿ ಬೊಂಬೆ ಪೂಜೆ ಮಾಡುವುದು ವಾಡಿಕೆ. ಕೆಲವರು ಕೆಲಸದ ಒತ್ತಡದಿಂದ ಬೊಂಬೆ ಪೂಜೆ ಮಾಡುವುದಿಲ್ಲ‌. ಹಾಗಾಗಿ ಏರ್ಪೋರ್ಟ್ ನಲ್ಲಿ ಈ ಬಾರಿ ಕಮಲಾಕೃತಿಯಲ್ಲಿ ಬೊಂಬೆಗಳನ್ನ ಪ್ರದರ್ಶನಕ್ಕೆ ಇರಿಸಲಾಗಿದೆ. ಪ್ರಮುಖವಾಗಿ ರಾಮಾಯಣ, ಕುರುಕ್ಷೇತ್ರ, ನರಸಿಂಹ ಅವತಾರಗಳನ್ನು ಸಾರುವ ಬೊಂಬೆಗಳ ಜೊತೆಯಲ್ಲಿ ಗಣಪತಿ, ಚಾಮುಂಡಿ, ಲಕ್ಷ್ಮೀ ಸೇರಿ ವಿವಿಧ ದೇವರ ಬೊಂಬೆಗಳ‌ ಪ್ರದರ್ಶನ ಮಾಡಲಾಗಿದೆ.

ಇನ್ನೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದಲ್ಲಿಯೇ ಮೂರನೇ ಅತಿ ದೊಡ್ಡ ವಿಮಾನ ನಿಲ್ದಾಣ. ಹಾಗಾಗಿ ಇಲ್ಲಿಗೆ ದೇಶ ವಿದೇಶದಿಂದ ಪ್ರಯಾಣಿಕರು ಆಗಮಿಸುತ್ತಾರೆ. ಹಾಗಾಗಿಯೇ ಏರ್ಪೋರ್ಟ್ ಆಡಳಿತ ಮಂಡಳಿ ಕರ್ನಾಟಕದ ನೆಲ, ಜಲ, ಸಂಸ್ಕೃತಿ ಸಾರವು ಕಲಾತಂಡಗಳನ್ನು ಕರೆಸಿ ನೃತ್ಯ ಮಾಡಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ ಡೊಳ್ಳು ಕುಣಿತ, ಗಾರುಡಿ ಗೊಂಬೆ, ಬೇಡರ ನೃತ್ಯ, ತಮಟೆ ವಾದ್ಯ, ಗೊಂಬೆಯಾಟ, ಯಕ್ಷಗಾನ, ಸುಗಮ ಸಂಗೀತ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಟ್ಟು 9 ದಿನಗಳ ಕಾಲ ಆಯೋಜನೆ ಮಾಡಿದ್ದಾರೆ. ಇನ್ನೂ ಈ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಲು ಈ ಬಾರಿ ಸಾರ್ವಜನಿಕರಿಗೂ ಅವಕಾಶ ಮಾಡಿಕೊಡಲಾಗಿದೆ. ಯಾವುದೇ ಟಿಕೆಟ್ ಅಥವಾ ದರ ಇಲ್ಲ, ಎಲ್ಲರಿಗೂ ಉಚಿತವಾಗಿ ನೋಡಬಹುದು.

ಒಟ್ಟಾರೆ…ಎಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದ್ದು, ಏರ್ಪೋರ್ಟ್ ನಲ್ಲಿಯೂ ಕೂಡ ದಸರಾ ಸಂಭ್ರಮ ಕಳೆಗಟ್ಟಿದೆ. ಉತ್ತರ ಭಾರತದ ಪ್ರಯಾಣಿಕರು ದಸರಾ ಬೊಂಬೆಗಳನ್ನು ನೋಡಿ ಸಂತಸಪಟ್ಟು, ಸೆಲ್ಫಿ ತೆಗೆದುಕೊಂಡು ಸಂಭ್ರಮಪಟ್ಟರು.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

3 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

4 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

6 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

8 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

10 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

10 hours ago