ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆ ಕಟ್ಟಿದ ದಸರಾ ಸಂಭ್ರಮ: ಪಟ್ಟದ ಬೊಂಬೆಗಳ ಪ್ರದರ್ಶನ ಮಾಡಿ ನಾಡಿನ‌ ಸಂಸ್ಕೃತಿ ಸಾರಿದ ಏರ್ಪೋರ್ಟ್ ಸಿಬ್ಬಂದಿ

ಎಲ್ಲರ ಚಿತ್ತ ಮೈಸೂರಿನ ದಸರಾ ಸಂಭ್ರಮದತ್ತ. ನಾಡಿನ ಎಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದೆ. ದಸರಾ ಅಂದ ಕೂಡಲೇ ಥಟ್ ಅಂತ ನೆನಪಿಗೆ ಬರೋದು ಬೊಂಬೆಗಳ‌ ಪೂಜೆ. ಹಾಗಾಗಿ ದೇಶ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ನಾಡಿನ ಕಲೆ, ಸಂಸ್ಕೃತಿ, ಈ ನೆಲ, ಜಲದ ಬಗ್ಗೆ ಅರಿವು ಮೂಡಿಸಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೊಂಬೆಗಳ ಪ್ರದರ್ಶನ ಮಾಡಿದೆ.

ಹೌದು, ಹೀಗೆ ಡೊಳ್ಳು‌ ಕುಣಿತಕ್ಕೆ ಭರ್ಜರಿ ಸ್ಟೆಪ್ಸ್ ಹಾಕುತ್ತಿರುವ ಸಿಬ್ಬಂದಿ, ಬೊಂಬೆಗಳ ಮುಂದೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ಪ್ರಯಾಣಿಕರು, ವಿವಿಧ ಕಥೆಗಳನ್ನ ಸಾರುವ ಬೊಂಬೆಗಳ ಪ್ರದರ್ಶನ ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ. ನವರಾತ್ರಿ ಆಚರಣೆ ಹಿನ್ನೆಲೆ ಮನೆಗಳಲ್ಲಿ ಬೊಂಬೆ ಪೂಜೆ ಮಾಡುವುದು ವಾಡಿಕೆ. ಕೆಲವರು ಕೆಲಸದ ಒತ್ತಡದಿಂದ ಬೊಂಬೆ ಪೂಜೆ ಮಾಡುವುದಿಲ್ಲ‌. ಹಾಗಾಗಿ ಏರ್ಪೋರ್ಟ್ ನಲ್ಲಿ ಈ ಬಾರಿ ಕಮಲಾಕೃತಿಯಲ್ಲಿ ಬೊಂಬೆಗಳನ್ನ ಪ್ರದರ್ಶನಕ್ಕೆ ಇರಿಸಲಾಗಿದೆ. ಪ್ರಮುಖವಾಗಿ ರಾಮಾಯಣ, ಕುರುಕ್ಷೇತ್ರ, ನರಸಿಂಹ ಅವತಾರಗಳನ್ನು ಸಾರುವ ಬೊಂಬೆಗಳ ಜೊತೆಯಲ್ಲಿ ಗಣಪತಿ, ಚಾಮುಂಡಿ, ಲಕ್ಷ್ಮೀ ಸೇರಿ ವಿವಿಧ ದೇವರ ಬೊಂಬೆಗಳ‌ ಪ್ರದರ್ಶನ ಮಾಡಲಾಗಿದೆ.

ಇನ್ನೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದಲ್ಲಿಯೇ ಮೂರನೇ ಅತಿ ದೊಡ್ಡ ವಿಮಾನ ನಿಲ್ದಾಣ. ಹಾಗಾಗಿ ಇಲ್ಲಿಗೆ ದೇಶ ವಿದೇಶದಿಂದ ಪ್ರಯಾಣಿಕರು ಆಗಮಿಸುತ್ತಾರೆ. ಹಾಗಾಗಿಯೇ ಏರ್ಪೋರ್ಟ್ ಆಡಳಿತ ಮಂಡಳಿ ಕರ್ನಾಟಕದ ನೆಲ, ಜಲ, ಸಂಸ್ಕೃತಿ ಸಾರವು ಕಲಾತಂಡಗಳನ್ನು ಕರೆಸಿ ನೃತ್ಯ ಮಾಡಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ ಡೊಳ್ಳು ಕುಣಿತ, ಗಾರುಡಿ ಗೊಂಬೆ, ಬೇಡರ ನೃತ್ಯ, ತಮಟೆ ವಾದ್ಯ, ಗೊಂಬೆಯಾಟ, ಯಕ್ಷಗಾನ, ಸುಗಮ ಸಂಗೀತ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಟ್ಟು 9 ದಿನಗಳ ಕಾಲ ಆಯೋಜನೆ ಮಾಡಿದ್ದಾರೆ. ಇನ್ನೂ ಈ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಲು ಈ ಬಾರಿ ಸಾರ್ವಜನಿಕರಿಗೂ ಅವಕಾಶ ಮಾಡಿಕೊಡಲಾಗಿದೆ. ಯಾವುದೇ ಟಿಕೆಟ್ ಅಥವಾ ದರ ಇಲ್ಲ, ಎಲ್ಲರಿಗೂ ಉಚಿತವಾಗಿ ನೋಡಬಹುದು.

ಒಟ್ಟಾರೆ…ಎಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದ್ದು, ಏರ್ಪೋರ್ಟ್ ನಲ್ಲಿಯೂ ಕೂಡ ದಸರಾ ಸಂಭ್ರಮ ಕಳೆಗಟ್ಟಿದೆ. ಉತ್ತರ ಭಾರತದ ಪ್ರಯಾಣಿಕರು ದಸರಾ ಬೊಂಬೆಗಳನ್ನು ನೋಡಿ ಸಂತಸಪಟ್ಟು, ಸೆಲ್ಫಿ ತೆಗೆದುಕೊಂಡು ಸಂಭ್ರಮಪಟ್ಟರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago