ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆ ಕಟ್ಟಿದ ದಸರಾ ಸಂಭ್ರಮ: ಪಟ್ಟದ ಬೊಂಬೆಗಳ ಪ್ರದರ್ಶನ ಮಾಡಿ ನಾಡಿನ‌ ಸಂಸ್ಕೃತಿ ಸಾರಿದ ಏರ್ಪೋರ್ಟ್ ಸಿಬ್ಬಂದಿ

ಎಲ್ಲರ ಚಿತ್ತ ಮೈಸೂರಿನ ದಸರಾ ಸಂಭ್ರಮದತ್ತ. ನಾಡಿನ ಎಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದೆ. ದಸರಾ ಅಂದ ಕೂಡಲೇ ಥಟ್ ಅಂತ ನೆನಪಿಗೆ ಬರೋದು ಬೊಂಬೆಗಳ‌ ಪೂಜೆ. ಹಾಗಾಗಿ ದೇಶ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ನಾಡಿನ ಕಲೆ, ಸಂಸ್ಕೃತಿ, ಈ ನೆಲ, ಜಲದ ಬಗ್ಗೆ ಅರಿವು ಮೂಡಿಸಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೊಂಬೆಗಳ ಪ್ರದರ್ಶನ ಮಾಡಿದೆ.

ಹೌದು, ಹೀಗೆ ಡೊಳ್ಳು‌ ಕುಣಿತಕ್ಕೆ ಭರ್ಜರಿ ಸ್ಟೆಪ್ಸ್ ಹಾಕುತ್ತಿರುವ ಸಿಬ್ಬಂದಿ, ಬೊಂಬೆಗಳ ಮುಂದೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ಪ್ರಯಾಣಿಕರು, ವಿವಿಧ ಕಥೆಗಳನ್ನ ಸಾರುವ ಬೊಂಬೆಗಳ ಪ್ರದರ್ಶನ ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ. ನವರಾತ್ರಿ ಆಚರಣೆ ಹಿನ್ನೆಲೆ ಮನೆಗಳಲ್ಲಿ ಬೊಂಬೆ ಪೂಜೆ ಮಾಡುವುದು ವಾಡಿಕೆ. ಕೆಲವರು ಕೆಲಸದ ಒತ್ತಡದಿಂದ ಬೊಂಬೆ ಪೂಜೆ ಮಾಡುವುದಿಲ್ಲ‌. ಹಾಗಾಗಿ ಏರ್ಪೋರ್ಟ್ ನಲ್ಲಿ ಈ ಬಾರಿ ಕಮಲಾಕೃತಿಯಲ್ಲಿ ಬೊಂಬೆಗಳನ್ನ ಪ್ರದರ್ಶನಕ್ಕೆ ಇರಿಸಲಾಗಿದೆ. ಪ್ರಮುಖವಾಗಿ ರಾಮಾಯಣ, ಕುರುಕ್ಷೇತ್ರ, ನರಸಿಂಹ ಅವತಾರಗಳನ್ನು ಸಾರುವ ಬೊಂಬೆಗಳ ಜೊತೆಯಲ್ಲಿ ಗಣಪತಿ, ಚಾಮುಂಡಿ, ಲಕ್ಷ್ಮೀ ಸೇರಿ ವಿವಿಧ ದೇವರ ಬೊಂಬೆಗಳ‌ ಪ್ರದರ್ಶನ ಮಾಡಲಾಗಿದೆ.

ಇನ್ನೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದಲ್ಲಿಯೇ ಮೂರನೇ ಅತಿ ದೊಡ್ಡ ವಿಮಾನ ನಿಲ್ದಾಣ. ಹಾಗಾಗಿ ಇಲ್ಲಿಗೆ ದೇಶ ವಿದೇಶದಿಂದ ಪ್ರಯಾಣಿಕರು ಆಗಮಿಸುತ್ತಾರೆ. ಹಾಗಾಗಿಯೇ ಏರ್ಪೋರ್ಟ್ ಆಡಳಿತ ಮಂಡಳಿ ಕರ್ನಾಟಕದ ನೆಲ, ಜಲ, ಸಂಸ್ಕೃತಿ ಸಾರವು ಕಲಾತಂಡಗಳನ್ನು ಕರೆಸಿ ನೃತ್ಯ ಮಾಡಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ ಡೊಳ್ಳು ಕುಣಿತ, ಗಾರುಡಿ ಗೊಂಬೆ, ಬೇಡರ ನೃತ್ಯ, ತಮಟೆ ವಾದ್ಯ, ಗೊಂಬೆಯಾಟ, ಯಕ್ಷಗಾನ, ಸುಗಮ ಸಂಗೀತ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಟ್ಟು 9 ದಿನಗಳ ಕಾಲ ಆಯೋಜನೆ ಮಾಡಿದ್ದಾರೆ. ಇನ್ನೂ ಈ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಲು ಈ ಬಾರಿ ಸಾರ್ವಜನಿಕರಿಗೂ ಅವಕಾಶ ಮಾಡಿಕೊಡಲಾಗಿದೆ. ಯಾವುದೇ ಟಿಕೆಟ್ ಅಥವಾ ದರ ಇಲ್ಲ, ಎಲ್ಲರಿಗೂ ಉಚಿತವಾಗಿ ನೋಡಬಹುದು.

ಒಟ್ಟಾರೆ…ಎಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದ್ದು, ಏರ್ಪೋರ್ಟ್ ನಲ್ಲಿಯೂ ಕೂಡ ದಸರಾ ಸಂಭ್ರಮ ಕಳೆಗಟ್ಟಿದೆ. ಉತ್ತರ ಭಾರತದ ಪ್ರಯಾಣಿಕರು ದಸರಾ ಬೊಂಬೆಗಳನ್ನು ನೋಡಿ ಸಂತಸಪಟ್ಟು, ಸೆಲ್ಫಿ ತೆಗೆದುಕೊಂಡು ಸಂಭ್ರಮಪಟ್ಟರು.

Ramesh Babu

Journalist

Recent Posts

ಮಹಿಳಾ ಪೊಲೀಸರಿಗೆ ಸೀರೆ, ಹಣ್ಣು-ಹಂಪಲು ನೀಡಿ ಸತ್ಕಾರ

ದೊಡ್ಡಬಳ್ಳಾಪುರ: ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ವತಿಯಿಂದ ‘ಕಣ್ಣು ತೆರೆಸಿದ ಹೆಣ್ಣು’ ಕಾರ್ಯಕ್ರಮದ ಅಂಗವಾಗಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ…

12 hours ago

ನಂದಿನಿ ಶೀತಲಿಕರಣ ಘಟಕದಲ್ಲಿ ದುರ್ಘಟನೆ: ಮರದಿಂದ ಬಿದ್ದು ಯುವಕ ಸಾವು, ನ್ಯಾಯಕ್ಕಾಗಿ ಕುಟುಂಬಸ್ಥರ ಪ್ರತಿಭಟನೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದ ಬಳಿಯ ನಂದಿನಿ ಹಾಲಿನ ಶೀತಲಿಕರಣ ಘಟಕದ ಆವರಣದಲ್ಲಿ ನಡೆದ…

13 hours ago

ಕೆಎಚ್‌ಎಂಗೆ ಡಿಸಿಎಂ ಸ್ಥಾನ ನೀಡಿ- ಮುನಿಕೃಷ್ಣಪ್ಪ ಆಗ್ರಹ

ಹುಟ್ಟುಹಬ್ಬವನ್ನು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಚರಿಸುವುದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ ತಿಳಿಸಿದರು. ದೊಡ್ಡಬಳ್ಳಾಪುರ…

13 hours ago

ಬೇಸಿಗೆ ರಜೆ ಬಳಿಕ ಶಾಲೆಗಳಿಗೆ ಮರುಕಳಿಸಿದ ವಿದ್ಯಾರ್ಥಿಗಳು: ಹಬ್ಬದ ವಾತಾವರಣದಲ್ಲಿ ಶಾಲಾ ಪ್ರಾರಂಭೋತ್ಸವ

ದೊಡ್ಡಬಳ್ಳಾಪುರ, ಜೂನ್ 1: ಬೇಸಿಗೆ ರಜೆ ಬಳಿಕ ಸೋಮವಾರದಿಂದ ರಾಜ್ಯಾದ್ಯಂತ ಶಾಲೆಗಳು ಪುನರಾರಂಭಗೊಂಡಿದ್ದು, 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧಿಕೃತ…

19 hours ago

ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿಗೆ ಐತಿಹಾಸಿಕ ಜಯ: ಸತತ 2ನೇ ಬಾರಿ ಚಾಂಪಿಯನ್

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್…

1 day ago

ಭೀಕರ ಸರಣಿ ಅಪಘಾತ: ಐವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

  ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಸಮೀಪ ಭಾನುವಾರ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ…

2 days ago