ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ರಂಗಮಂದಿರದಲ್ಲಿ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ 2ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಆಹಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು..
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘಕ್ಕೆ ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಿದರೆ ಅದಕ್ಕೆ ಬೇಕಾಗುವ ಸಹಕಾರ ನೀಡಲಾಗುವುದು. ಇತ್ತೀಚೆಗೆ ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿ ದಾರಿಗೆ ತರಲು ತಾಯಂದಿರಿಗೆ ಮಾತ್ರ ಸಾಧ್ಯ. ಮಕ್ಕಳಿಗೆ ಒಳ್ಳೆ ನಡತೆ, ವಿದ್ಯಾಭ್ಯಾಸ, ಮಾನವೀಯ ಮೌಲ್ಯಗಳನ್ನು ಕಲಿಸಬೇಕು… ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕು. ಅದಕ್ಕೆ ಸಹಕಾರ ನೀಡಲಾಗುವುದು ಎಂದರು…
ಈ ವೇಳೆ ಘಾಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಕೆಪಿಸಿಸಿ ಸದಸ್ಯ ಎಸ್ ಆರ್ ಮುನಿರಾಜ್, ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಶ್ರೀಧರ್, ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶಾಂತಮ್ಮ, ಗೌರವ ಅಧ್ಯಕ್ಷೆ ರೇವತಿ ಆನಂತರಾಮ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಇತರರು ಉಪಸ್ಥಿತರಿದ್ದರು….
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…