ಕೆಂಪೇಗೌಡ ದೂರಗಾಮಿ ಚಿಂತನೆಯ ನಾಯಕ-ಕರ್ನಾಟಕದ ಅಗ್ರಗಣ್ಯ ಆಡಳಿತಗಾರ -ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ

ನಾಡಪ್ರಭು ಕೆಂಪೇಗೌಡ ಕರ್ನಾಟಕದ ಅಗ್ರಗಣ್ಯ ಆಡಳಿತಗಾರರ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಬೆಂಗಳೂರು ನಗರದ ನಿರ್ಮಾತೃವಾಗಿರುವ ಕೆಂಪೇಗೌಡರು ದೂರಗಾಮಿ ಚಿಂತನೆಗಳನ್ನು ಹೊಂದಿದ್ದ ನಾಯಕ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.

ನಗರದ ಅಭಿನೇತ್ರಿ ಸಾಂಸ್ಕೃತಿಕ ಸಂಘದ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್‌ಗಳ ಸಹಯೋಗದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಜಯನಗರ ಸಾಮ್ರಾಜ್ಯದ ಅಡಿಯಲ್ಲಿ ಇದ್ದ ಪಾಳ್ಯಗಾರರಲ್ಲಿ ಕೆಂಪೇಗೌಡರು ಪ್ರಮುಖರು. ಬೆಂಗಳೂರು ನಗರಕ್ಕೆ ಕಾಯಕಲ್ಪ ಹಾಕಿದವರು. ಬಹಳ ದೂರಗಾಮಿ ಚಿಂತನೆ ಮತ್ತು ಕಾರ್ಯಾಚರಣೆ ಅವರ ಆಡಳಿತದಿಂದಾಗಿ ಇಂದು ಬೆಂಗಳೂರು ಅಗಾಧವಾಗಿ ಬೆಳೆಯಲು ಸಾಧ್ಯವಾಗಿದೆ. 1510ರಲ್ಲಿ ಜನಿಸಿದ ಕೆಂಪೇಗೌಡ ಸುಕ್ಷಿತರೂ ಹಾಗು ದಕ್ಷ ಆಡಳಿತಕ್ಕೆ ಹೆಸರಾದವರು. ಬೆಂಗಳೂರಿನಲ್ಲಿ ವಿವಿಧ ದಿಕ್ಕಿನಲ್ಲಿ ಮಹಾದ್ವಾರಗಳನ್ನು ನಿರ್ಮಿಸಿದರು. ನಗರದ ಹಲವೆಡೆ ಕೆರೆ ಕಟ್ಟೆಗಳನ್ನು ಕಟ್ಟಿಸಿದರು. ಹಲವು ಪ್ರದೇಶಗಳಲ್ಲಿ ದೇವಸ್ಥಾನಗಳನ್ನು ಕಟ್ಟಿದರು ಎಂದು ವಿಶ್ಲೇಷಿಸಿದರು.

*ಕೆರೆ, ದೇಗುಲಗಳ ನಿರ್ಮಾತೃ*:

ಬೆಂ.ಗ್ರಾ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ವಿವಿಧ ಸಮುದಾಯಗಳ ಕಸುಬುಗಳ ಬೆಳವಣಿಗೆಗೆ ಪೂರಕವಾದ ವ್ಯವಹಾರದ ವಾತಾವರಣವನ್ನು ನಿರ್ಮಿಸಿದ ಕೆಂಪೇಗೌಡರು, ಅದಕ್ಕಾಗಿ ವಿವಿಧ ಪೇಟೆಗಳು ಮತ್ತು ಬೀದಿಗಳನ್ನು ಹುಟ್ಟುಹಾಕಿದರು. ವಿಶಾಲ ರಸ್ತೆಗಳು ತಯಾರಾದವು. 1569ರವರೆಗೂ ಬದುಕಿದ್ದ ಕೆಂಪೇಗೌಡರು ಬೆಂಗಳೂರಿನಲ್ಲಿ ಸ್ಥಾಪಿಸಿದ ಕೆರೆ ಕಟ್ಟೆಗಳು, ದೇವಸ್ಥಾನಗಳು, ದ್ವಾರಗಳು ಈಗಲೂ ಕಾಣಸಿಗುತ್ತವೆ. 1537ರಲ್ಲಿ ಕೆಂಪೇಗೌಡರು ಬಸವನಗುಡಿ ನಂದಿ ಮಂದಿರವನ್ನು ಕಟ್ಟಿದರು. ಅದೇ ರೀತಿ ಗವಿಗಂಗಾಧರೇಶ್ವರ ದೇವಸ್ಥಾನದ ಜೀರ್ಣೋದ್ಧಾರ, ಅಲಸೂರು ಸೋಮೇಶ್ವರ ದೇವಸ್ಥಾನದ ಪುನಶ್ಚೇತನ, ಧರ್ಮಾಂಬುಧಿ, ಕೆಂಪಾಂಬುಧಿ, ಸಂಪಂಗಿ ಕೆರೆ, ಸಿದ್ದಿಕಟ್ಟೆ, ಕಾರಂಜಿ ಕಟ್ಟೆ ಇತ್ಯಾದಿ ಕೆರೆ ಕಟ್ಟೆಗಳನ್ನು ಕೆಂಪೇಗೌಡರು ನಗರದ ಹಲವೆಡೆ ಕಟ್ಟಿಸಿದರು ಎಂದು ಇತಿಹಾಸ ಹೇಳುತ್ತದೆ ಎಂದು ಉಲ್ಲೇಖಿಸಿದರು.

*ಕುಶಲ ಕಲೆಗಳ ಪೋಷಕ:*

ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಕೆಂಪೇಗೌಡ ನಾಲ್ಕು ಮಹಾದ್ವಾರ ಬೆಂಗಳೂರು ನಗರದ ಗಡಿಭಾಗವನ್ನು ಗುರುತಿಸಲು ವಿವಿಧ ದಿಕ್ಕುಗಳ ಅಂಚಿನಲ್ಲಿ ಕೆಂಪೇಗೌಡರು ನಾಲ್ಕು ಮಹಾದ್ವಾರಗಳನ್ನು ಕಟ್ಟಿದ್ದಾರೆ. ಇವಲ್ಲದೇ ಕೆಂಪೇಗೌಡರು ಇನ್ನೂ ಐದು ಸಣ್ಣ ದ್ವಾರಗಳನ್ನೂ ಕಟ್ಟಿದ್ದರು. ರೈತರ ಅಕ್ಕಿ, ರಾಗಿ, ಹತ್ತಿ, ವಿವಿಧ ದವಸ ಧಾನ್ಯಗಳ ಮಾರಾಟಕ್ಕೆ ಪ್ರತ್ಯೇಕ ಮಾರುಕಟ್ಟೆ ರಚಿಸಿದರು. ವಿವಿಧ ಸಮುದಾಯಗಳ ಕಸುಬುಗಳಾದ ಮಡಿಕೆ ತಯಾರಿಕೆ, ಕೈಮಗ್ಗ, ಕೈಕುಸುರಿ ಇತ್ಯಾದಿಗಳಿಗೂ ಪ್ರತ್ಯೇಕ ಪೇಟೆಗಳನ್ನು ಕಟ್ಟಿದರು. ದೇಶದ ವಿವಿಧೆಡೆಯಿಂದ ಕರಕುಶಲರನ್ನು ಮತ್ತು ಕಸುಬುದಾರರನ್ನು ಬೆಂಗಳೂರಿಗೆ ಕರೆತಂದು ಇಲ್ಲಿನ ಮಾರುಕಟ್ಟೆ ವಿಸ್ತರಿಸಿದರು ಎಂದು ವಿವರಿಸಿದರು.

ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಎಚ್.ಎಸ್.ರೇವತಿ ಅನಂತರಾಮ್, ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಗೋವಿಂದರಾಜು, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷ ಬಿ.ಅನಂತರಾಮ್, ಕಸಾಪ ತಾಲೂಕು ಘಟಕದ ಕಾರ್ಯದರ್ಶಿ ಎ.ಜಯರಾಮ್, ಕಸಬಾ ಘಟಕದ ಅಧ್ಯಕ್ಷ ದಾದಾಫೀರ್, ಕಾರ್ಯದರ್ಶಿ ಸುರೇಶ್, ಸಫೀರ್, ನಾಡಪ್ರಭು ಕೆಂಪೇಗೌಡ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶಾಂತಮ್ಮ, ಕಾರ್ಯದರ್ಶಿ ಲಕ್ಷ್ಮಿ, ಪದಾಧಿಕಾರಿಗಳಾದ ಭಾಗ್ಯ,‌ ಮಂಗಳ, ರಶ್ಮಿ, ಸವಿತಾ, ಅಪೂರ್ವ, ಕಲಾವಿದ ಹಾಡೋನಹಳ್ಳಿ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

4 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

6 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

17 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

18 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

20 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

22 hours ago