ಕೆಂಪೇಗೌಡ ದೂರಗಾಮಿ ಚಿಂತನೆಯ ನಾಯಕ-ಕರ್ನಾಟಕದ ಅಗ್ರಗಣ್ಯ ಆಡಳಿತಗಾರ -ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ

ನಾಡಪ್ರಭು ಕೆಂಪೇಗೌಡ ಕರ್ನಾಟಕದ ಅಗ್ರಗಣ್ಯ ಆಡಳಿತಗಾರರ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಬೆಂಗಳೂರು ನಗರದ ನಿರ್ಮಾತೃವಾಗಿರುವ ಕೆಂಪೇಗೌಡರು ದೂರಗಾಮಿ ಚಿಂತನೆಗಳನ್ನು ಹೊಂದಿದ್ದ ನಾಯಕ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.

ನಗರದ ಅಭಿನೇತ್ರಿ ಸಾಂಸ್ಕೃತಿಕ ಸಂಘದ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್‌ಗಳ ಸಹಯೋಗದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಜಯನಗರ ಸಾಮ್ರಾಜ್ಯದ ಅಡಿಯಲ್ಲಿ ಇದ್ದ ಪಾಳ್ಯಗಾರರಲ್ಲಿ ಕೆಂಪೇಗೌಡರು ಪ್ರಮುಖರು. ಬೆಂಗಳೂರು ನಗರಕ್ಕೆ ಕಾಯಕಲ್ಪ ಹಾಕಿದವರು. ಬಹಳ ದೂರಗಾಮಿ ಚಿಂತನೆ ಮತ್ತು ಕಾರ್ಯಾಚರಣೆ ಅವರ ಆಡಳಿತದಿಂದಾಗಿ ಇಂದು ಬೆಂಗಳೂರು ಅಗಾಧವಾಗಿ ಬೆಳೆಯಲು ಸಾಧ್ಯವಾಗಿದೆ. 1510ರಲ್ಲಿ ಜನಿಸಿದ ಕೆಂಪೇಗೌಡ ಸುಕ್ಷಿತರೂ ಹಾಗು ದಕ್ಷ ಆಡಳಿತಕ್ಕೆ ಹೆಸರಾದವರು. ಬೆಂಗಳೂರಿನಲ್ಲಿ ವಿವಿಧ ದಿಕ್ಕಿನಲ್ಲಿ ಮಹಾದ್ವಾರಗಳನ್ನು ನಿರ್ಮಿಸಿದರು. ನಗರದ ಹಲವೆಡೆ ಕೆರೆ ಕಟ್ಟೆಗಳನ್ನು ಕಟ್ಟಿಸಿದರು. ಹಲವು ಪ್ರದೇಶಗಳಲ್ಲಿ ದೇವಸ್ಥಾನಗಳನ್ನು ಕಟ್ಟಿದರು ಎಂದು ವಿಶ್ಲೇಷಿಸಿದರು.

*ಕೆರೆ, ದೇಗುಲಗಳ ನಿರ್ಮಾತೃ*:

ಬೆಂ.ಗ್ರಾ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ವಿವಿಧ ಸಮುದಾಯಗಳ ಕಸುಬುಗಳ ಬೆಳವಣಿಗೆಗೆ ಪೂರಕವಾದ ವ್ಯವಹಾರದ ವಾತಾವರಣವನ್ನು ನಿರ್ಮಿಸಿದ ಕೆಂಪೇಗೌಡರು, ಅದಕ್ಕಾಗಿ ವಿವಿಧ ಪೇಟೆಗಳು ಮತ್ತು ಬೀದಿಗಳನ್ನು ಹುಟ್ಟುಹಾಕಿದರು. ವಿಶಾಲ ರಸ್ತೆಗಳು ತಯಾರಾದವು. 1569ರವರೆಗೂ ಬದುಕಿದ್ದ ಕೆಂಪೇಗೌಡರು ಬೆಂಗಳೂರಿನಲ್ಲಿ ಸ್ಥಾಪಿಸಿದ ಕೆರೆ ಕಟ್ಟೆಗಳು, ದೇವಸ್ಥಾನಗಳು, ದ್ವಾರಗಳು ಈಗಲೂ ಕಾಣಸಿಗುತ್ತವೆ. 1537ರಲ್ಲಿ ಕೆಂಪೇಗೌಡರು ಬಸವನಗುಡಿ ನಂದಿ ಮಂದಿರವನ್ನು ಕಟ್ಟಿದರು. ಅದೇ ರೀತಿ ಗವಿಗಂಗಾಧರೇಶ್ವರ ದೇವಸ್ಥಾನದ ಜೀರ್ಣೋದ್ಧಾರ, ಅಲಸೂರು ಸೋಮೇಶ್ವರ ದೇವಸ್ಥಾನದ ಪುನಶ್ಚೇತನ, ಧರ್ಮಾಂಬುಧಿ, ಕೆಂಪಾಂಬುಧಿ, ಸಂಪಂಗಿ ಕೆರೆ, ಸಿದ್ದಿಕಟ್ಟೆ, ಕಾರಂಜಿ ಕಟ್ಟೆ ಇತ್ಯಾದಿ ಕೆರೆ ಕಟ್ಟೆಗಳನ್ನು ಕೆಂಪೇಗೌಡರು ನಗರದ ಹಲವೆಡೆ ಕಟ್ಟಿಸಿದರು ಎಂದು ಇತಿಹಾಸ ಹೇಳುತ್ತದೆ ಎಂದು ಉಲ್ಲೇಖಿಸಿದರು.

*ಕುಶಲ ಕಲೆಗಳ ಪೋಷಕ:*

ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಕೆಂಪೇಗೌಡ ನಾಲ್ಕು ಮಹಾದ್ವಾರ ಬೆಂಗಳೂರು ನಗರದ ಗಡಿಭಾಗವನ್ನು ಗುರುತಿಸಲು ವಿವಿಧ ದಿಕ್ಕುಗಳ ಅಂಚಿನಲ್ಲಿ ಕೆಂಪೇಗೌಡರು ನಾಲ್ಕು ಮಹಾದ್ವಾರಗಳನ್ನು ಕಟ್ಟಿದ್ದಾರೆ. ಇವಲ್ಲದೇ ಕೆಂಪೇಗೌಡರು ಇನ್ನೂ ಐದು ಸಣ್ಣ ದ್ವಾರಗಳನ್ನೂ ಕಟ್ಟಿದ್ದರು. ರೈತರ ಅಕ್ಕಿ, ರಾಗಿ, ಹತ್ತಿ, ವಿವಿಧ ದವಸ ಧಾನ್ಯಗಳ ಮಾರಾಟಕ್ಕೆ ಪ್ರತ್ಯೇಕ ಮಾರುಕಟ್ಟೆ ರಚಿಸಿದರು. ವಿವಿಧ ಸಮುದಾಯಗಳ ಕಸುಬುಗಳಾದ ಮಡಿಕೆ ತಯಾರಿಕೆ, ಕೈಮಗ್ಗ, ಕೈಕುಸುರಿ ಇತ್ಯಾದಿಗಳಿಗೂ ಪ್ರತ್ಯೇಕ ಪೇಟೆಗಳನ್ನು ಕಟ್ಟಿದರು. ದೇಶದ ವಿವಿಧೆಡೆಯಿಂದ ಕರಕುಶಲರನ್ನು ಮತ್ತು ಕಸುಬುದಾರರನ್ನು ಬೆಂಗಳೂರಿಗೆ ಕರೆತಂದು ಇಲ್ಲಿನ ಮಾರುಕಟ್ಟೆ ವಿಸ್ತರಿಸಿದರು ಎಂದು ವಿವರಿಸಿದರು.

ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಎಚ್.ಎಸ್.ರೇವತಿ ಅನಂತರಾಮ್, ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಗೋವಿಂದರಾಜು, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷ ಬಿ.ಅನಂತರಾಮ್, ಕಸಾಪ ತಾಲೂಕು ಘಟಕದ ಕಾರ್ಯದರ್ಶಿ ಎ.ಜಯರಾಮ್, ಕಸಬಾ ಘಟಕದ ಅಧ್ಯಕ್ಷ ದಾದಾಫೀರ್, ಕಾರ್ಯದರ್ಶಿ ಸುರೇಶ್, ಸಫೀರ್, ನಾಡಪ್ರಭು ಕೆಂಪೇಗೌಡ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶಾಂತಮ್ಮ, ಕಾರ್ಯದರ್ಶಿ ಲಕ್ಷ್ಮಿ, ಪದಾಧಿಕಾರಿಗಳಾದ ಭಾಗ್ಯ,‌ ಮಂಗಳ, ರಶ್ಮಿ, ಸವಿತಾ, ಅಪೂರ್ವ, ಕಲಾವಿದ ಹಾಡೋನಹಳ್ಳಿ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

4 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

4 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

10 hours ago