ಕೆಂಪೇಗೌಡ ದೂರಗಾಮಿ ಚಿಂತನೆಯ ನಾಯಕ-ಕರ್ನಾಟಕದ ಅಗ್ರಗಣ್ಯ ಆಡಳಿತಗಾರ -ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ

ನಾಡಪ್ರಭು ಕೆಂಪೇಗೌಡ ಕರ್ನಾಟಕದ ಅಗ್ರಗಣ್ಯ ಆಡಳಿತಗಾರರ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಬೆಂಗಳೂರು ನಗರದ ನಿರ್ಮಾತೃವಾಗಿರುವ ಕೆಂಪೇಗೌಡರು ದೂರಗಾಮಿ ಚಿಂತನೆಗಳನ್ನು ಹೊಂದಿದ್ದ ನಾಯಕ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.

ನಗರದ ಅಭಿನೇತ್ರಿ ಸಾಂಸ್ಕೃತಿಕ ಸಂಘದ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್‌ಗಳ ಸಹಯೋಗದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಜಯನಗರ ಸಾಮ್ರಾಜ್ಯದ ಅಡಿಯಲ್ಲಿ ಇದ್ದ ಪಾಳ್ಯಗಾರರಲ್ಲಿ ಕೆಂಪೇಗೌಡರು ಪ್ರಮುಖರು. ಬೆಂಗಳೂರು ನಗರಕ್ಕೆ ಕಾಯಕಲ್ಪ ಹಾಕಿದವರು. ಬಹಳ ದೂರಗಾಮಿ ಚಿಂತನೆ ಮತ್ತು ಕಾರ್ಯಾಚರಣೆ ಅವರ ಆಡಳಿತದಿಂದಾಗಿ ಇಂದು ಬೆಂಗಳೂರು ಅಗಾಧವಾಗಿ ಬೆಳೆಯಲು ಸಾಧ್ಯವಾಗಿದೆ. 1510ರಲ್ಲಿ ಜನಿಸಿದ ಕೆಂಪೇಗೌಡ ಸುಕ್ಷಿತರೂ ಹಾಗು ದಕ್ಷ ಆಡಳಿತಕ್ಕೆ ಹೆಸರಾದವರು. ಬೆಂಗಳೂರಿನಲ್ಲಿ ವಿವಿಧ ದಿಕ್ಕಿನಲ್ಲಿ ಮಹಾದ್ವಾರಗಳನ್ನು ನಿರ್ಮಿಸಿದರು. ನಗರದ ಹಲವೆಡೆ ಕೆರೆ ಕಟ್ಟೆಗಳನ್ನು ಕಟ್ಟಿಸಿದರು. ಹಲವು ಪ್ರದೇಶಗಳಲ್ಲಿ ದೇವಸ್ಥಾನಗಳನ್ನು ಕಟ್ಟಿದರು ಎಂದು ವಿಶ್ಲೇಷಿಸಿದರು.

*ಕೆರೆ, ದೇಗುಲಗಳ ನಿರ್ಮಾತೃ*:

ಬೆಂ.ಗ್ರಾ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ವಿವಿಧ ಸಮುದಾಯಗಳ ಕಸುಬುಗಳ ಬೆಳವಣಿಗೆಗೆ ಪೂರಕವಾದ ವ್ಯವಹಾರದ ವಾತಾವರಣವನ್ನು ನಿರ್ಮಿಸಿದ ಕೆಂಪೇಗೌಡರು, ಅದಕ್ಕಾಗಿ ವಿವಿಧ ಪೇಟೆಗಳು ಮತ್ತು ಬೀದಿಗಳನ್ನು ಹುಟ್ಟುಹಾಕಿದರು. ವಿಶಾಲ ರಸ್ತೆಗಳು ತಯಾರಾದವು. 1569ರವರೆಗೂ ಬದುಕಿದ್ದ ಕೆಂಪೇಗೌಡರು ಬೆಂಗಳೂರಿನಲ್ಲಿ ಸ್ಥಾಪಿಸಿದ ಕೆರೆ ಕಟ್ಟೆಗಳು, ದೇವಸ್ಥಾನಗಳು, ದ್ವಾರಗಳು ಈಗಲೂ ಕಾಣಸಿಗುತ್ತವೆ. 1537ರಲ್ಲಿ ಕೆಂಪೇಗೌಡರು ಬಸವನಗುಡಿ ನಂದಿ ಮಂದಿರವನ್ನು ಕಟ್ಟಿದರು. ಅದೇ ರೀತಿ ಗವಿಗಂಗಾಧರೇಶ್ವರ ದೇವಸ್ಥಾನದ ಜೀರ್ಣೋದ್ಧಾರ, ಅಲಸೂರು ಸೋಮೇಶ್ವರ ದೇವಸ್ಥಾನದ ಪುನಶ್ಚೇತನ, ಧರ್ಮಾಂಬುಧಿ, ಕೆಂಪಾಂಬುಧಿ, ಸಂಪಂಗಿ ಕೆರೆ, ಸಿದ್ದಿಕಟ್ಟೆ, ಕಾರಂಜಿ ಕಟ್ಟೆ ಇತ್ಯಾದಿ ಕೆರೆ ಕಟ್ಟೆಗಳನ್ನು ಕೆಂಪೇಗೌಡರು ನಗರದ ಹಲವೆಡೆ ಕಟ್ಟಿಸಿದರು ಎಂದು ಇತಿಹಾಸ ಹೇಳುತ್ತದೆ ಎಂದು ಉಲ್ಲೇಖಿಸಿದರು.

*ಕುಶಲ ಕಲೆಗಳ ಪೋಷಕ:*

ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಕೆಂಪೇಗೌಡ ನಾಲ್ಕು ಮಹಾದ್ವಾರ ಬೆಂಗಳೂರು ನಗರದ ಗಡಿಭಾಗವನ್ನು ಗುರುತಿಸಲು ವಿವಿಧ ದಿಕ್ಕುಗಳ ಅಂಚಿನಲ್ಲಿ ಕೆಂಪೇಗೌಡರು ನಾಲ್ಕು ಮಹಾದ್ವಾರಗಳನ್ನು ಕಟ್ಟಿದ್ದಾರೆ. ಇವಲ್ಲದೇ ಕೆಂಪೇಗೌಡರು ಇನ್ನೂ ಐದು ಸಣ್ಣ ದ್ವಾರಗಳನ್ನೂ ಕಟ್ಟಿದ್ದರು. ರೈತರ ಅಕ್ಕಿ, ರಾಗಿ, ಹತ್ತಿ, ವಿವಿಧ ದವಸ ಧಾನ್ಯಗಳ ಮಾರಾಟಕ್ಕೆ ಪ್ರತ್ಯೇಕ ಮಾರುಕಟ್ಟೆ ರಚಿಸಿದರು. ವಿವಿಧ ಸಮುದಾಯಗಳ ಕಸುಬುಗಳಾದ ಮಡಿಕೆ ತಯಾರಿಕೆ, ಕೈಮಗ್ಗ, ಕೈಕುಸುರಿ ಇತ್ಯಾದಿಗಳಿಗೂ ಪ್ರತ್ಯೇಕ ಪೇಟೆಗಳನ್ನು ಕಟ್ಟಿದರು. ದೇಶದ ವಿವಿಧೆಡೆಯಿಂದ ಕರಕುಶಲರನ್ನು ಮತ್ತು ಕಸುಬುದಾರರನ್ನು ಬೆಂಗಳೂರಿಗೆ ಕರೆತಂದು ಇಲ್ಲಿನ ಮಾರುಕಟ್ಟೆ ವಿಸ್ತರಿಸಿದರು ಎಂದು ವಿವರಿಸಿದರು.

ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಎಚ್.ಎಸ್.ರೇವತಿ ಅನಂತರಾಮ್, ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಗೋವಿಂದರಾಜು, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷ ಬಿ.ಅನಂತರಾಮ್, ಕಸಾಪ ತಾಲೂಕು ಘಟಕದ ಕಾರ್ಯದರ್ಶಿ ಎ.ಜಯರಾಮ್, ಕಸಬಾ ಘಟಕದ ಅಧ್ಯಕ್ಷ ದಾದಾಫೀರ್, ಕಾರ್ಯದರ್ಶಿ ಸುರೇಶ್, ಸಫೀರ್, ನಾಡಪ್ರಭು ಕೆಂಪೇಗೌಡ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶಾಂತಮ್ಮ, ಕಾರ್ಯದರ್ಶಿ ಲಕ್ಷ್ಮಿ, ಪದಾಧಿಕಾರಿಗಳಾದ ಭಾಗ್ಯ,‌ ಮಂಗಳ, ರಶ್ಮಿ, ಸವಿತಾ, ಅಪೂರ್ವ, ಕಲಾವಿದ ಹಾಡೋನಹಳ್ಳಿ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

22 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago