ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಮುಖ್ಯಮಂತ್ರಿ ಚಾಲನೆ

ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಮಂಗಳವಾರ ಉದ್ಘಾಟಿಸಿದರು.

ಉದ್ಘಾಡಿಸಿ ಮಾತನಾಡಿದ ಮುಖ್ಯಮಂತ್ರಿಗಳು, `ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು’ ಎಂದರು.‌

ಸಚಿವ ಎಂ ಬಿ ಪಾಟೀಲ ಮಾತನಾಡಿ, `ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ, ಅಗರಬತ್ತಿ, ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಲಿಡ್ಕರ್ ಉತ್ಪನ್ನಗಳು, ಬಗೆಬಗೆಯ ಪರಿಮಳವಿರುವ ಕಾಫಿಪುಡಿ ಮತ್ತು ಪಾನೀಯ, ಕೈಮಗ್ಗದ ಉತ್ಪನ್ನಗಳು, ಇಳಕಲ್ ಸೀರೆ, ಲಂಬಾಣಿ ಉಡುಪು, ಗಂಧದ ಕಲಾಕೃತಿ, ಬಿದರಿ ಕಲಾಕೃತಿ, ಮೈಸೂರು ಶೈಲಿಯ ಕಲಾಕೃತಿಗಳು, ಮುಂತಾದವು ಸಿಗಲಿವೆ. ಒಟ್ಟಾರೆಯಾಗಿ ಜಿ.ಐ. ಮಾನ್ಯತೆ ಹೊಂದಿರುವ ರಾಜ್ಯದ 45 ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಎರಡೂ ಈ ಮಳಿಗೆಯಲ್ಲಿ ನಡೆಯಲಿದೆ’ ಎಂದಿದ್ದಾರೆ.

ರಾಜ್ಯವೇ ಹೆಮ್ಮೆಪಡುವಂತಹ ಪಾರಂಪರಿಕ ಮತ್ತು ಭೌಗೋಳಿಕ ವಿಶಿಷ್ಟತೆಯ ಮನ್ನಣೆ ಹೊಂದಿರುವ ಉತ್ಪನ್ನಗಳನ್ನು ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಮಳಿಗೆ ಆರಂಭದ ಆಶಯವಾಗಿದೆ. ಇದಕ್ಕೆ ಸರಕಾರಿ ಸ್ವಾಮ್ಯದ ಕೆ.ಎಸ್.ಡಿ.ಎಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಯಮಿತ, ಕೆಎಸ್ಐಸಿ, ಕಾಫಿ ಬೋರ್ಡ್ ಮತ್ತು ಲಿಡ್ಕರ್ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ. ವಿಮಾನ ನಿಲ್ದಾಣಕ್ಕೆ ಬರುವವರಿಗೆ ಮತ್ತು ಇಲ್ಲಿಂದ ಹೋಗುವವರಿಗೆ ಒಂದೇ ತಾಣದಲ್ಲಿ ಕರ್ನಾಟಕದ ಅಸ್ಮಿತೆ ಇಲ್ಲಿ ಅನುಭವಕ್ಕೆ ಸಿಗಲಿದೆ ಎಂದು ಅವರು ಬಣ್ಣಿಸಿದ್ದಾರೆ.

ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಕಲಾಲೋಕ ಮಳಿಗೆಗೆ ಟರ್ಮಿನಲ್ -2ರ ಡೊಮೆಸ್ಟಿಕ್ ಬೇನಲ್ಲಿ 132 ಚ.ಮೀ. ಜಾಗವನ್ನು ಬಾಡಿಗೆಗೆ ಒದಗಿಸಿದೆ. ಟರ್ಮಿನಲ್-2ರಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರ ನಿರ್ಗಮನ ವಲಯದಲ್ಲಿ 140 ಚ.ಮೀ. ಜಾಗದಲ್ಲಿ ಇಂತಹುದೇ ಮತ್ತೊಂದು ಮಳಿಗೆ ಆರಂಭಿಸಲಾಗುವುದು. ಮಳಿಗೆಯನ್ನು ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಪಡಿಯಚ್ಚಿನಂತೆ ಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ಹಿಂದೆ ದೂರದೃಷ್ಟಿ ಇದೆ ಎಂದು ಅವರು ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಜವಳಿ ಆಯುಕ್ತರಾದ ಜ್ಯೋತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಪಿ.ಬಸವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago