ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಮಂಗಳವಾರ ಉದ್ಘಾಟಿಸಿದರು.
ಉದ್ಘಾಡಿಸಿ ಮಾತನಾಡಿದ ಮುಖ್ಯಮಂತ್ರಿಗಳು, `ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು’ ಎಂದರು.
ಸಚಿವ ಎಂ ಬಿ ಪಾಟೀಲ ಮಾತನಾಡಿ, `ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ, ಅಗರಬತ್ತಿ, ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಲಿಡ್ಕರ್ ಉತ್ಪನ್ನಗಳು, ಬಗೆಬಗೆಯ ಪರಿಮಳವಿರುವ ಕಾಫಿಪುಡಿ ಮತ್ತು ಪಾನೀಯ, ಕೈಮಗ್ಗದ ಉತ್ಪನ್ನಗಳು, ಇಳಕಲ್ ಸೀರೆ, ಲಂಬಾಣಿ ಉಡುಪು, ಗಂಧದ ಕಲಾಕೃತಿ, ಬಿದರಿ ಕಲಾಕೃತಿ, ಮೈಸೂರು ಶೈಲಿಯ ಕಲಾಕೃತಿಗಳು, ಮುಂತಾದವು ಸಿಗಲಿವೆ. ಒಟ್ಟಾರೆಯಾಗಿ ಜಿ.ಐ. ಮಾನ್ಯತೆ ಹೊಂದಿರುವ ರಾಜ್ಯದ 45 ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಎರಡೂ ಈ ಮಳಿಗೆಯಲ್ಲಿ ನಡೆಯಲಿದೆ’ ಎಂದಿದ್ದಾರೆ.
ರಾಜ್ಯವೇ ಹೆಮ್ಮೆಪಡುವಂತಹ ಪಾರಂಪರಿಕ ಮತ್ತು ಭೌಗೋಳಿಕ ವಿಶಿಷ್ಟತೆಯ ಮನ್ನಣೆ ಹೊಂದಿರುವ ಉತ್ಪನ್ನಗಳನ್ನು ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಮಳಿಗೆ ಆರಂಭದ ಆಶಯವಾಗಿದೆ. ಇದಕ್ಕೆ ಸರಕಾರಿ ಸ್ವಾಮ್ಯದ ಕೆ.ಎಸ್.ಡಿ.ಎಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಯಮಿತ, ಕೆಎಸ್ಐಸಿ, ಕಾಫಿ ಬೋರ್ಡ್ ಮತ್ತು ಲಿಡ್ಕರ್ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ. ವಿಮಾನ ನಿಲ್ದಾಣಕ್ಕೆ ಬರುವವರಿಗೆ ಮತ್ತು ಇಲ್ಲಿಂದ ಹೋಗುವವರಿಗೆ ಒಂದೇ ತಾಣದಲ್ಲಿ ಕರ್ನಾಟಕದ ಅಸ್ಮಿತೆ ಇಲ್ಲಿ ಅನುಭವಕ್ಕೆ ಸಿಗಲಿದೆ ಎಂದು ಅವರು ಬಣ್ಣಿಸಿದ್ದಾರೆ.
ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಕಲಾಲೋಕ ಮಳಿಗೆಗೆ ಟರ್ಮಿನಲ್ -2ರ ಡೊಮೆಸ್ಟಿಕ್ ಬೇನಲ್ಲಿ 132 ಚ.ಮೀ. ಜಾಗವನ್ನು ಬಾಡಿಗೆಗೆ ಒದಗಿಸಿದೆ. ಟರ್ಮಿನಲ್-2ರಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರ ನಿರ್ಗಮನ ವಲಯದಲ್ಲಿ 140 ಚ.ಮೀ. ಜಾಗದಲ್ಲಿ ಇಂತಹುದೇ ಮತ್ತೊಂದು ಮಳಿಗೆ ಆರಂಭಿಸಲಾಗುವುದು. ಮಳಿಗೆಯನ್ನು ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಪಡಿಯಚ್ಚಿನಂತೆ ಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ಹಿಂದೆ ದೂರದೃಷ್ಟಿ ಇದೆ ಎಂದು ಅವರು ನುಡಿದಿದ್ದಾರೆ.
ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಜವಳಿ ಆಯುಕ್ತರಾದ ಜ್ಯೋತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಪಿ.ಬಸವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…