ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಮುಖಂಡರು ಪಕ್ಷದ ತತ್ವ ಸಿದ್ಧಾಂತಗಳ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಕೆಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.
ನಗರದ ಕೆಆರ್ ಎಸ್ ಪಕ್ಷದ ಕಚೇರಿಯಲ್ಲಿ ನಡೆದ ತಾಲೂಕು ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಕ್ಷದ ಉದ್ದೇಶ ಸ್ವಚ್ಛ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಂತಹದ್ದು, ಲೂಟಿಕೋರ ರಾಜಕಾರಣಿಗಳನ್ನು ಸಮಾಜದಿಂದ ಹೊರ ಹಾಕಿ, ಸಾಮಾಜಿಕ ಕಳಕಳಿ ಇರುವಂತಹ ಜನ ಸ್ನೇಹಿ ರಾಜಕಾರಣಿಗಳು ನಮ್ಮ ಪಕ್ಷಕ್ಕೆ ಹಾಗೂ ಸಮಾಜಕ್ಕೆ ಬೇಕು. ಈ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಎಂದರು.
ಪ್ರಸ್ತುತ ರಾಜ್ಯ ರಾಜಕೀಯ ತುಂಬಾ ಹದಗೆಟ್ಟಿದೆ. ಅದು ರಾಜಕಾರಣ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆ ಆಗುತ್ತದೆ. ಜನರ ಹಣವನ್ನು ಲೂಟಿ ಹೊಡೆದು ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದಾರೆ ಎಂದು ದೂರಿದರು.
ನಂತರ ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ವಿ.ನಾಗರಾಜು ಮಾತನಾಡಿ, ನಾನು ಪಕ್ಷದ ಸಿದ್ಧಾಂತವನ್ನು ಒಪ್ಪಿ ಕೆಲಸ ಮಾಡುತ್ತಿದ್ದೇನೆ. ನನ್ನ ಕಾರ್ಯವೈಖರಿಯನ್ನು ಪರಿಗಣಿಸಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಪಕ್ಷದ ಈ ನಿರ್ಧಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ತಾಲೂಕಿನಲ್ಲಿ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಿಂದ ಪಕ್ಷ ಗಟ್ಟಿಗೊಳಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.
ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ
1.ಕೆ.ವಿ.ನಾಗರಾಜ್-ಅಧ್ಯಕ್ಷ
2.ಡಿ.ಎಂ.ಶ್ರೀನಿವಾಸ್-ಉಪಾಧ್ಯಕ್ಷ
3.ಡಿ.ಪಿ.ಮುರಹರಿ-ಪ್ರಧಾನ ಕಾರ್ಯದರ್ಶಿ
4.ಮಂಜುನಾಥ್-ಕಾರ್ಯದರ್ಶಿ
5.ಪಾಪಣ್ಣ-ಕಾರ್ಯದರ್ಶಿ
6.ಗೌತಮ್ ಗಂಗಪ್ಪ-ಜಂಟಿ ಕಾರ್ಯದರ್ಶಿ
7.ಎಸ್.ಬಾಲಕೃಷ್ಣ-ಸಂಘಟನಾ ಕಾರ್ಯದರ್ಶಿ
ಈ ವೇಳೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…