ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಮುಖಂಡರು ಪಕ್ಷದ ತತ್ವ ಸಿದ್ಧಾಂತಗಳ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಕೆಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.
ನಗರದ ಕೆಆರ್ ಎಸ್ ಪಕ್ಷದ ಕಚೇರಿಯಲ್ಲಿ ನಡೆದ ತಾಲೂಕು ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಕ್ಷದ ಉದ್ದೇಶ ಸ್ವಚ್ಛ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಂತಹದ್ದು, ಲೂಟಿಕೋರ ರಾಜಕಾರಣಿಗಳನ್ನು ಸಮಾಜದಿಂದ ಹೊರ ಹಾಕಿ, ಸಾಮಾಜಿಕ ಕಳಕಳಿ ಇರುವಂತಹ ಜನ ಸ್ನೇಹಿ ರಾಜಕಾರಣಿಗಳು ನಮ್ಮ ಪಕ್ಷಕ್ಕೆ ಹಾಗೂ ಸಮಾಜಕ್ಕೆ ಬೇಕು. ಈ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಎಂದರು.
ಪ್ರಸ್ತುತ ರಾಜ್ಯ ರಾಜಕೀಯ ತುಂಬಾ ಹದಗೆಟ್ಟಿದೆ. ಅದು ರಾಜಕಾರಣ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆ ಆಗುತ್ತದೆ. ಜನರ ಹಣವನ್ನು ಲೂಟಿ ಹೊಡೆದು ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದಾರೆ ಎಂದು ದೂರಿದರು.
ನಂತರ ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ವಿ.ನಾಗರಾಜು ಮಾತನಾಡಿ, ನಾನು ಪಕ್ಷದ ಸಿದ್ಧಾಂತವನ್ನು ಒಪ್ಪಿ ಕೆಲಸ ಮಾಡುತ್ತಿದ್ದೇನೆ. ನನ್ನ ಕಾರ್ಯವೈಖರಿಯನ್ನು ಪರಿಗಣಿಸಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಪಕ್ಷದ ಈ ನಿರ್ಧಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ತಾಲೂಕಿನಲ್ಲಿ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಿಂದ ಪಕ್ಷ ಗಟ್ಟಿಗೊಳಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.
ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ
1.ಕೆ.ವಿ.ನಾಗರಾಜ್-ಅಧ್ಯಕ್ಷ
2.ಡಿ.ಎಂ.ಶ್ರೀನಿವಾಸ್-ಉಪಾಧ್ಯಕ್ಷ
3.ಡಿ.ಪಿ.ಮುರಹರಿ-ಪ್ರಧಾನ ಕಾರ್ಯದರ್ಶಿ
4.ಮಂಜುನಾಥ್-ಕಾರ್ಯದರ್ಶಿ
5.ಪಾಪಣ್ಣ-ಕಾರ್ಯದರ್ಶಿ
6.ಗೌತಮ್ ಗಂಗಪ್ಪ-ಜಂಟಿ ಕಾರ್ಯದರ್ಶಿ
7.ಎಸ್.ಬಾಲಕೃಷ್ಣ-ಸಂಘಟನಾ ಕಾರ್ಯದರ್ಶಿ
ಈ ವೇಳೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…