ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಕೆ.ವಿ.ನಾಗರಾಜ್ ಆಯ್ಕೆ: ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು- ಕೆಆರ್ ಎಸ್ ಬೆಂ. ಗ್ರಾ ಜಿಲ್ಲಾಧ್ಯಕ್ಷ ಶಿವಶಂಕರ್

ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಮುಖಂಡರು ಪಕ್ಷದ ತತ್ವ‌ ಸಿದ್ಧಾಂತಗಳ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಕೆಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.

ನಗರದ ಕೆಆರ್ ಎಸ್ ಪಕ್ಷದ ಕಚೇರಿಯಲ್ಲಿ ನಡೆದ ತಾಲೂಕು ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಕ್ಷದ ಉದ್ದೇಶ ಸ್ವಚ್ಛ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಂತಹದ್ದು, ಲೂಟಿಕೋರ ರಾಜಕಾರಣಿಗಳನ್ನು ಸಮಾಜದಿಂದ ಹೊರ ಹಾಕಿ, ಸಾಮಾಜಿಕ ಕಳಕಳಿ ಇರುವಂತಹ ಜನ ಸ್ನೇಹಿ ರಾಜಕಾರಣಿಗಳು ನಮ್ಮ ಪಕ್ಷಕ್ಕೆ ಹಾಗೂ ಸಮಾಜಕ್ಕೆ ಬೇಕು. ಈ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಎಂದರು.

ಪ್ರಸ್ತುತ ರಾಜ್ಯ ರಾಜಕೀಯ ತುಂಬಾ ಹದಗೆಟ್ಟಿದೆ. ಅದು ರಾಜಕಾರಣ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆ ಆಗುತ್ತದೆ. ಜನರ ಹಣವನ್ನು ಲೂಟಿ ಹೊಡೆದು ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದಾರೆ ಎಂದು ದೂರಿದರು.

ನಂತರ ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ವಿ.ನಾಗರಾಜು ಮಾತನಾಡಿ, ನಾನು ಪಕ್ಷದ ಸಿದ್ಧಾಂತವನ್ನು ಒಪ್ಪಿ ಕೆಲಸ ಮಾಡುತ್ತಿದ್ದೇನೆ. ನನ್ನ ಕಾರ್ಯವೈಖರಿಯನ್ನು ಪರಿಗಣಿಸಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಪಕ್ಷದ ಈ ನಿರ್ಧಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ತಾಲೂಕಿನಲ್ಲಿ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಿಂದ ಪಕ್ಷ ಗಟ್ಟಿಗೊಳಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.

ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ

1.ಕೆ.ವಿ.ನಾಗರಾಜ್-ಅಧ್ಯಕ್ಷ

2.ಡಿ.ಎಂ.ಶ್ರೀನಿವಾಸ್-ಉಪಾಧ್ಯಕ್ಷ

3.ಡಿ.ಪಿ.ಮುರಹರಿ-ಪ್ರಧಾನ ಕಾರ್ಯದರ್ಶಿ

4.ಮಂಜುನಾಥ್-ಕಾರ್ಯದರ್ಶಿ

5.ಪಾಪಣ್ಣ-ಕಾರ್ಯದರ್ಶಿ

6.ಗೌತಮ್ ಗಂಗಪ್ಪ-ಜಂಟಿ ಕಾರ್ಯದರ್ಶಿ

7.ಎಸ್.ಬಾಲಕೃಷ್ಣ-ಸಂಘಟನಾ ಕಾರ್ಯದರ್ಶಿ

ಈ ವೇಳೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

7 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

1 day ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

1 day ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 days ago