ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಕೆ.ವಿ.ನಾಗರಾಜ್ ಆಯ್ಕೆ: ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು- ಕೆಆರ್ ಎಸ್ ಬೆಂ. ಗ್ರಾ ಜಿಲ್ಲಾಧ್ಯಕ್ಷ ಶಿವಶಂಕರ್

ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಮುಖಂಡರು ಪಕ್ಷದ ತತ್ವ‌ ಸಿದ್ಧಾಂತಗಳ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಕೆಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.

ನಗರದ ಕೆಆರ್ ಎಸ್ ಪಕ್ಷದ ಕಚೇರಿಯಲ್ಲಿ ನಡೆದ ತಾಲೂಕು ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಕ್ಷದ ಉದ್ದೇಶ ಸ್ವಚ್ಛ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಂತಹದ್ದು, ಲೂಟಿಕೋರ ರಾಜಕಾರಣಿಗಳನ್ನು ಸಮಾಜದಿಂದ ಹೊರ ಹಾಕಿ, ಸಾಮಾಜಿಕ ಕಳಕಳಿ ಇರುವಂತಹ ಜನ ಸ್ನೇಹಿ ರಾಜಕಾರಣಿಗಳು ನಮ್ಮ ಪಕ್ಷಕ್ಕೆ ಹಾಗೂ ಸಮಾಜಕ್ಕೆ ಬೇಕು. ಈ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಎಂದರು.

ಪ್ರಸ್ತುತ ರಾಜ್ಯ ರಾಜಕೀಯ ತುಂಬಾ ಹದಗೆಟ್ಟಿದೆ. ಅದು ರಾಜಕಾರಣ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆ ಆಗುತ್ತದೆ. ಜನರ ಹಣವನ್ನು ಲೂಟಿ ಹೊಡೆದು ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದಾರೆ ಎಂದು ದೂರಿದರು.

ನಂತರ ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ವಿ.ನಾಗರಾಜು ಮಾತನಾಡಿ, ನಾನು ಪಕ್ಷದ ಸಿದ್ಧಾಂತವನ್ನು ಒಪ್ಪಿ ಕೆಲಸ ಮಾಡುತ್ತಿದ್ದೇನೆ. ನನ್ನ ಕಾರ್ಯವೈಖರಿಯನ್ನು ಪರಿಗಣಿಸಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಪಕ್ಷದ ಈ ನಿರ್ಧಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ತಾಲೂಕಿನಲ್ಲಿ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಿಂದ ಪಕ್ಷ ಗಟ್ಟಿಗೊಳಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.

ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ

1.ಕೆ.ವಿ.ನಾಗರಾಜ್-ಅಧ್ಯಕ್ಷ

2.ಡಿ.ಎಂ.ಶ್ರೀನಿವಾಸ್-ಉಪಾಧ್ಯಕ್ಷ

3.ಡಿ.ಪಿ.ಮುರಹರಿ-ಪ್ರಧಾನ ಕಾರ್ಯದರ್ಶಿ

4.ಮಂಜುನಾಥ್-ಕಾರ್ಯದರ್ಶಿ

5.ಪಾಪಣ್ಣ-ಕಾರ್ಯದರ್ಶಿ

6.ಗೌತಮ್ ಗಂಗಪ್ಪ-ಜಂಟಿ ಕಾರ್ಯದರ್ಶಿ

7.ಎಸ್.ಬಾಲಕೃಷ್ಣ-ಸಂಘಟನಾ ಕಾರ್ಯದರ್ಶಿ

ಈ ವೇಳೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

7 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

8 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

9 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

13 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

20 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago