ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಮುಖಂಡರು ಪಕ್ಷದ ತತ್ವ ಸಿದ್ಧಾಂತಗಳ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಕೆಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.
ನಗರದ ಕೆಆರ್ ಎಸ್ ಪಕ್ಷದ ಕಚೇರಿಯಲ್ಲಿ ನಡೆದ ತಾಲೂಕು ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಕ್ಷದ ಉದ್ದೇಶ ಸ್ವಚ್ಛ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಂತಹದ್ದು, ಲೂಟಿಕೋರ ರಾಜಕಾರಣಿಗಳನ್ನು ಸಮಾಜದಿಂದ ಹೊರ ಹಾಕಿ, ಸಾಮಾಜಿಕ ಕಳಕಳಿ ಇರುವಂತಹ ಜನ ಸ್ನೇಹಿ ರಾಜಕಾರಣಿಗಳು ನಮ್ಮ ಪಕ್ಷಕ್ಕೆ ಹಾಗೂ ಸಮಾಜಕ್ಕೆ ಬೇಕು. ಈ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಎಂದರು.
ಪ್ರಸ್ತುತ ರಾಜ್ಯ ರಾಜಕೀಯ ತುಂಬಾ ಹದಗೆಟ್ಟಿದೆ. ಅದು ರಾಜಕಾರಣ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆ ಆಗುತ್ತದೆ. ಜನರ ಹಣವನ್ನು ಲೂಟಿ ಹೊಡೆದು ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದಾರೆ ಎಂದು ದೂರಿದರು.
ನಂತರ ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ವಿ.ನಾಗರಾಜು ಮಾತನಾಡಿ, ನಾನು ಪಕ್ಷದ ಸಿದ್ಧಾಂತವನ್ನು ಒಪ್ಪಿ ಕೆಲಸ ಮಾಡುತ್ತಿದ್ದೇನೆ. ನನ್ನ ಕಾರ್ಯವೈಖರಿಯನ್ನು ಪರಿಗಣಿಸಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಪಕ್ಷದ ಈ ನಿರ್ಧಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ತಾಲೂಕಿನಲ್ಲಿ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಿಂದ ಪಕ್ಷ ಗಟ್ಟಿಗೊಳಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.
ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ
1.ಕೆ.ವಿ.ನಾಗರಾಜ್-ಅಧ್ಯಕ್ಷ
2.ಡಿ.ಎಂ.ಶ್ರೀನಿವಾಸ್-ಉಪಾಧ್ಯಕ್ಷ
3.ಡಿ.ಪಿ.ಮುರಹರಿ-ಪ್ರಧಾನ ಕಾರ್ಯದರ್ಶಿ
4.ಮಂಜುನಾಥ್-ಕಾರ್ಯದರ್ಶಿ
5.ಪಾಪಣ್ಣ-ಕಾರ್ಯದರ್ಶಿ
6.ಗೌತಮ್ ಗಂಗಪ್ಪ-ಜಂಟಿ ಕಾರ್ಯದರ್ಶಿ
7.ಎಸ್.ಬಾಲಕೃಷ್ಣ-ಸಂಘಟನಾ ಕಾರ್ಯದರ್ಶಿ
ಈ ವೇಳೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…