ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಮುಖಂಡರು ಪಕ್ಷದ ತತ್ವ ಸಿದ್ಧಾಂತಗಳ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಕೆಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.
ನಗರದ ಕೆಆರ್ ಎಸ್ ಪಕ್ಷದ ಕಚೇರಿಯಲ್ಲಿ ನಡೆದ ತಾಲೂಕು ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಕ್ಷದ ಉದ್ದೇಶ ಸ್ವಚ್ಛ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಂತಹದ್ದು, ಲೂಟಿಕೋರ ರಾಜಕಾರಣಿಗಳನ್ನು ಸಮಾಜದಿಂದ ಹೊರ ಹಾಕಿ, ಸಾಮಾಜಿಕ ಕಳಕಳಿ ಇರುವಂತಹ ಜನ ಸ್ನೇಹಿ ರಾಜಕಾರಣಿಗಳು ನಮ್ಮ ಪಕ್ಷಕ್ಕೆ ಹಾಗೂ ಸಮಾಜಕ್ಕೆ ಬೇಕು. ಈ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಎಂದರು.
ಪ್ರಸ್ತುತ ರಾಜ್ಯ ರಾಜಕೀಯ ತುಂಬಾ ಹದಗೆಟ್ಟಿದೆ. ಅದು ರಾಜಕಾರಣ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆ ಆಗುತ್ತದೆ. ಜನರ ಹಣವನ್ನು ಲೂಟಿ ಹೊಡೆದು ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದಾರೆ ಎಂದು ದೂರಿದರು.
ನಂತರ ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ವಿ.ನಾಗರಾಜು ಮಾತನಾಡಿ, ನಾನು ಪಕ್ಷದ ಸಿದ್ಧಾಂತವನ್ನು ಒಪ್ಪಿ ಕೆಲಸ ಮಾಡುತ್ತಿದ್ದೇನೆ. ನನ್ನ ಕಾರ್ಯವೈಖರಿಯನ್ನು ಪರಿಗಣಿಸಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಪಕ್ಷದ ಈ ನಿರ್ಧಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ತಾಲೂಕಿನಲ್ಲಿ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಿಂದ ಪಕ್ಷ ಗಟ್ಟಿಗೊಳಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.
ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ
1.ಕೆ.ವಿ.ನಾಗರಾಜ್-ಅಧ್ಯಕ್ಷ
2.ಡಿ.ಎಂ.ಶ್ರೀನಿವಾಸ್-ಉಪಾಧ್ಯಕ್ಷ
3.ಡಿ.ಪಿ.ಮುರಹರಿ-ಪ್ರಧಾನ ಕಾರ್ಯದರ್ಶಿ
4.ಮಂಜುನಾಥ್-ಕಾರ್ಯದರ್ಶಿ
5.ಪಾಪಣ್ಣ-ಕಾರ್ಯದರ್ಶಿ
6.ಗೌತಮ್ ಗಂಗಪ್ಪ-ಜಂಟಿ ಕಾರ್ಯದರ್ಶಿ
7.ಎಸ್.ಬಾಲಕೃಷ್ಣ-ಸಂಘಟನಾ ಕಾರ್ಯದರ್ಶಿ
ಈ ವೇಳೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…