ಹುಟ್ಟುಹಬ್ಬವನ್ನು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಚರಿಸುವುದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹುಟ್ಟುಹಬ್ಬದ ಭಾಗವಾಗಿ ಹಣ್ಣುಹಂಪಲು ವಿತರಿಸಿ ಮಾತನಾಡಿದ ಅವರು, ವಿಜೃಂಭಣೆಯ ಆಚರಣೆಯ ಬದಲಾಗಿ, ಬಡವರಿಗೆ, ರೋಗಿಗಳಿಗೆ ನೆರವಾಗುವಂತಹ ಸಾಮಾಜಿಕ ಚಟುವಟಿಕೆಗಳನ್ನು ಒಳಗೊಂಡ ಹುಟ್ಟುಹಬ್ಬದ ಆಚರಣೆಯೂ ಎಲ್ಲರಿಗೂ ಮಾದರಿ. ಇದೇ ರೀತಿ ಹುಟ್ಟುಹಬ್ಬದ ಅಂಗವಾಗಿ ಹಣ್ಣುಹಂಪಲನ್ನು ವಿತರಿಸುವ ಕೆಲಸ ಮಾಡಲಾಗಿದೆ. ಜನರ ಆರ್ಶೀವಾದದಿಂದ ಸಾಮಾಜಿಕ ಕಾರ್ಯಗಳು ಸಹಕಾರಗೊಳ್ಳುತ್ತಿದೆ ಎಂದರು.
ಕೆಎಚ್ಎಂಗೆ ಡಿಸಿಎಂ ಸ್ಥಾನ ನೀಡಿ
ಕೆ.ಎಚ್ ಮುನಿಯಪ್ಪ ಅವರು ದೇಶ ಕಂಡ ಧೀಮಂತ ನಾಯಕರಲ್ಲಿ ಒಬ್ಬರು. ಅವರು ಯಾವುದೋ ಒಂದು ಜಾತಿಗೆ ಸೀಮಿತವಲ್ಲ. ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಸಾಕಷ್ಟು ಅಭಿವೃದ್ದಿ ಕಾರ್ಯವಾಗಲಿದೆ. ಅನ್ನಭಾಗ್ಯ ಯೋಜನೆಯನ್ನು ಕೂಡ ಯಶಸ್ವಿಯಾಗಿ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ತಮ್ಮ ಕೆಲಸದ ಮೂಲಕ ಮಾತನಾಡುವವರು. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅವರು ಪ್ರಭಾವ ಹೊಂದಿದ್ದಾರೆ. ಜನರ ನಾಡಿಮಿಡಿತವನ್ನು ಅರಿತುಕೊಂಡಿದ್ದಾರೆ. ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂದರು.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್, ಕೆಪಿಸಿಸಿ ಸದಸ್ಯ ಎಸ್.ಆರ್ ಮುನಿರಾಜ್, ವಾಲ್ಮೀಕಿ ಸಂಘದ ತಾಲೂಕು ಉಪಾಧ್ಯಕ್ಷ ಕುಮಾರ್ ಸಿ, ಹೋಬಳಿ ಅಧ್ಯಕ್ಷ ಕೃಷ್ಣ, ಸಿನಿಮಾ ನಿರ್ಮಾಪಕ ಲಕ್ಷ್ಮಿಪತಿ, ಮುಖಂಡರಾದ ರಾಮೇಗೌಡ, ನರಸಿಂಹಯ್ಯ, ಕೆಂಪಣ್ಣ, ಟಿಎಪಿಎಂಸಿ ನಿರ್ದೇಶಕ ರಾಮಾಂಜಿನಪ್ಪ, ಮುನಿಕೃಷ್ಣಪ್ಪ, ಕೃಷ್ಣಮೂರ್ತಿ ಡಿ ಎಂ (ಕಿಟ್ಟಿ), ರಮೇಶ್ ಸೇರಿದಂತೆ ಅನೇಕರು ಹಾಜರಿದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…