ಕೆಎಚ್‌ಎಂಗೆ ಡಿಸಿಎಂ ಸ್ಥಾನ ನೀಡಿ- ಮುನಿಕೃಷ್ಣಪ್ಪ ಆಗ್ರಹ

ಹುಟ್ಟುಹಬ್ಬವನ್ನು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಚರಿಸುವುದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹುಟ್ಟುಹಬ್ಬದ ಭಾಗವಾಗಿ ಹಣ್ಣುಹಂಪಲು ವಿತರಿಸಿ ಮಾತನಾಡಿದ ಅವರು, ವಿಜೃಂಭಣೆಯ ಆಚರಣೆಯ ಬದಲಾಗಿ, ಬಡವರಿಗೆ, ರೋಗಿಗಳಿಗೆ ನೆರವಾಗುವಂತಹ ಸಾಮಾಜಿಕ ಚಟುವಟಿಕೆಗಳನ್ನು ಒಳಗೊಂಡ ಹುಟ್ಟುಹಬ್ಬದ ಆಚರಣೆಯೂ ಎಲ್ಲರಿಗೂ ಮಾದರಿ. ಇದೇ ರೀತಿ ಹುಟ್ಟುಹಬ್ಬದ ಅಂಗವಾಗಿ ಹಣ್ಣುಹಂಪಲನ್ನು ವಿತರಿಸುವ ಕೆಲಸ ಮಾಡಲಾಗಿದೆ. ಜನರ ಆರ್ಶೀವಾದದಿಂದ ಸಾಮಾಜಿಕ ಕಾರ್ಯಗಳು ಸಹಕಾರಗೊಳ್ಳುತ್ತಿದೆ ಎಂದರು.

ಕೆಎಚ್‌ಎಂಗೆ ಡಿಸಿಎಂ ಸ್ಥಾನ ನೀಡಿ

ಕೆ.ಎಚ್ ಮುನಿಯಪ್ಪ ಅವರು ದೇಶ ಕಂಡ ಧೀಮಂತ ನಾಯಕರಲ್ಲಿ ಒಬ್ಬರು. ಅವರು ಯಾವುದೋ ಒಂದು ಜಾತಿಗೆ ಸೀಮಿತವಲ್ಲ. ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಸಾಕಷ್ಟು ಅಭಿವೃದ್ದಿ ಕಾರ್ಯವಾಗಲಿದೆ. ಅನ್ನಭಾಗ್ಯ ಯೋಜನೆಯನ್ನು ಕೂಡ ಯಶಸ್ವಿಯಾಗಿ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ತಮ್ಮ ಕೆಲಸದ ಮೂಲಕ ಮಾತನಾಡುವವರು. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅವರು ಪ್ರಭಾವ ಹೊಂದಿದ್ದಾರೆ. ಜನರ ನಾಡಿಮಿಡಿತವನ್ನು ಅರಿತುಕೊಂಡಿದ್ದಾರೆ. ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂದರು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್, ಕೆಪಿಸಿಸಿ ಸದಸ್ಯ ಎಸ್‌.ಆರ್ ಮುನಿರಾಜ್, ವಾಲ್ಮೀಕಿ ಸಂಘದ ತಾಲೂಕು ಉಪಾಧ್ಯಕ್ಷ ಕುಮಾರ್ ಸಿ, ಹೋಬಳಿ ಅಧ್ಯಕ್ಷ ಕೃಷ್ಣ, ಸಿನಿಮಾ ನಿರ್ಮಾಪಕ ಲಕ್ಷ್ಮಿಪತಿ,  ಮುಖಂಡರಾದ ರಾಮೇಗೌಡ, ನರಸಿಂಹಯ್ಯ, ಕೆಂಪಣ್ಣ, ಟಿಎಪಿಎಂಸಿ ನಿರ್ದೇಶಕ ರಾಮಾಂಜಿನಪ್ಪ, ಮುನಿಕೃಷ್ಣಪ್ಪ, ಕೃಷ್ಣಮೂರ್ತಿ ಡಿ ಎಂ (ಕಿಟ್ಟಿ), ರಮೇಶ್ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

3 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

7 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

10 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

2 days ago