ಕೆಎಚ್‌ಎಂಗೆ ಡಿಸಿಎಂ ಸ್ಥಾನ ನೀಡಿ- ಮುನಿಕೃಷ್ಣಪ್ಪ ಆಗ್ರಹ

ಹುಟ್ಟುಹಬ್ಬವನ್ನು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಚರಿಸುವುದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹುಟ್ಟುಹಬ್ಬದ ಭಾಗವಾಗಿ ಹಣ್ಣುಹಂಪಲು ವಿತರಿಸಿ ಮಾತನಾಡಿದ ಅವರು, ವಿಜೃಂಭಣೆಯ ಆಚರಣೆಯ ಬದಲಾಗಿ, ಬಡವರಿಗೆ, ರೋಗಿಗಳಿಗೆ ನೆರವಾಗುವಂತಹ ಸಾಮಾಜಿಕ ಚಟುವಟಿಕೆಗಳನ್ನು ಒಳಗೊಂಡ ಹುಟ್ಟುಹಬ್ಬದ ಆಚರಣೆಯೂ ಎಲ್ಲರಿಗೂ ಮಾದರಿ. ಇದೇ ರೀತಿ ಹುಟ್ಟುಹಬ್ಬದ ಅಂಗವಾಗಿ ಹಣ್ಣುಹಂಪಲನ್ನು ವಿತರಿಸುವ ಕೆಲಸ ಮಾಡಲಾಗಿದೆ. ಜನರ ಆರ್ಶೀವಾದದಿಂದ ಸಾಮಾಜಿಕ ಕಾರ್ಯಗಳು ಸಹಕಾರಗೊಳ್ಳುತ್ತಿದೆ ಎಂದರು.

ಕೆಎಚ್‌ಎಂಗೆ ಡಿಸಿಎಂ ಸ್ಥಾನ ನೀಡಿ

ಕೆ.ಎಚ್ ಮುನಿಯಪ್ಪ ಅವರು ದೇಶ ಕಂಡ ಧೀಮಂತ ನಾಯಕರಲ್ಲಿ ಒಬ್ಬರು. ಅವರು ಯಾವುದೋ ಒಂದು ಜಾತಿಗೆ ಸೀಮಿತವಲ್ಲ. ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಸಾಕಷ್ಟು ಅಭಿವೃದ್ದಿ ಕಾರ್ಯವಾಗಲಿದೆ. ಅನ್ನಭಾಗ್ಯ ಯೋಜನೆಯನ್ನು ಕೂಡ ಯಶಸ್ವಿಯಾಗಿ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ತಮ್ಮ ಕೆಲಸದ ಮೂಲಕ ಮಾತನಾಡುವವರು. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅವರು ಪ್ರಭಾವ ಹೊಂದಿದ್ದಾರೆ. ಜನರ ನಾಡಿಮಿಡಿತವನ್ನು ಅರಿತುಕೊಂಡಿದ್ದಾರೆ. ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂದರು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್, ಕೆಪಿಸಿಸಿ ಸದಸ್ಯ ಎಸ್‌.ಆರ್ ಮುನಿರಾಜ್, ವಾಲ್ಮೀಕಿ ಸಂಘದ ತಾಲೂಕು ಉಪಾಧ್ಯಕ್ಷ ಕುಮಾರ್ ಸಿ, ಹೋಬಳಿ ಅಧ್ಯಕ್ಷ ಕೃಷ್ಣ, ಸಿನಿಮಾ ನಿರ್ಮಾಪಕ ಲಕ್ಷ್ಮಿಪತಿ,  ಮುಖಂಡರಾದ ರಾಮೇಗೌಡ, ನರಸಿಂಹಯ್ಯ, ಕೆಂಪಣ್ಣ, ಟಿಎಪಿಎಂಸಿ ನಿರ್ದೇಶಕ ರಾಮಾಂಜಿನಪ್ಪ, ಮುನಿಕೃಷ್ಣಪ್ಪ, ಕೃಷ್ಣಮೂರ್ತಿ ಡಿ ಎಂ (ಕಿಟ್ಟಿ), ರಮೇಶ್ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಮಹಿಳಾ ಪೊಲೀಸರಿಗೆ ಸೀರೆ, ಹಣ್ಣು-ಹಂಪಲು ನೀಡಿ ಸತ್ಕಾರ

ದೊಡ್ಡಬಳ್ಳಾಪುರ: ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ವತಿಯಿಂದ ‘ಕಣ್ಣು ತೆರೆಸಿದ ಹೆಣ್ಣು’ ಕಾರ್ಯಕ್ರಮದ ಅಂಗವಾಗಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ…

2 hours ago

ನಂದಿನಿ ಶೀತಲಿಕರಣ ಘಟಕದಲ್ಲಿ ದುರ್ಘಟನೆ: ಮರದಿಂದ ಬಿದ್ದು ಯುವಕ ಸಾವು, ನ್ಯಾಯಕ್ಕಾಗಿ ಕುಟುಂಬಸ್ಥರ ಪ್ರತಿಭಟನೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದ ಬಳಿಯ ನಂದಿನಿ ಹಾಲಿನ ಶೀತಲಿಕರಣ ಘಟಕದ ಆವರಣದಲ್ಲಿ ನಡೆದ…

3 hours ago

ಬೇಸಿಗೆ ರಜೆ ಬಳಿಕ ಶಾಲೆಗಳಿಗೆ ಮರುಕಳಿಸಿದ ವಿದ್ಯಾರ್ಥಿಗಳು: ಹಬ್ಬದ ವಾತಾವರಣದಲ್ಲಿ ಶಾಲಾ ಪ್ರಾರಂಭೋತ್ಸವ

ದೊಡ್ಡಬಳ್ಳಾಪುರ, ಜೂನ್ 1: ಬೇಸಿಗೆ ರಜೆ ಬಳಿಕ ಸೋಮವಾರದಿಂದ ರಾಜ್ಯಾದ್ಯಂತ ಶಾಲೆಗಳು ಪುನರಾರಂಭಗೊಂಡಿದ್ದು, 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧಿಕೃತ…

10 hours ago

ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿಗೆ ಐತಿಹಾಸಿಕ ಜಯ: ಸತತ 2ನೇ ಬಾರಿ ಚಾಂಪಿಯನ್

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್…

20 hours ago

ಭೀಕರ ಸರಣಿ ಅಪಘಾತ: ಐವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

  ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಸಮೀಪ ಭಾನುವಾರ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ…

1 day ago

ಸಚಿವ ಸಂಪುಟದಲ್ಲಿ ಬೆಂ. ಗ್ರಾ ಪಾಲು ಎಷ್ಟು? ಕೆ.ಎಚ್. ಮುನಿಯಪ್ಪಗೆ ಡಿಸಿಎಂ ಬೇಡಿಕೆ, ಶರತ್ ಬಚ್ಚೇಗೌಡಗೆ ಮಂತ್ರಿಗಿರಿ ಚರ್ಚೆ

ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಹೊಸ ಸಚಿವ ಸಂಪುಟ ರಚನೆಗೆ ಕಸರತ್ತು ಆರಂಭವಾಗಿದ್ದು, ಬೆಂಗಳೂರು…

2 days ago