Categories: ಕೋಲಾರ

ಕೆಎಸ್ಆರ್‌ಟಿಸಿಯ ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರ ಸೇವಾ ನಿವೃತ್ತಿಗೆ ಅಭಿನಂದನೆ

ಕೋಲಾರ: ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರಿ ನಿಯಂತ್ರಣಾಧಿಕಾರಿಗಳಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರನ್ನು ಬುಧವಾರ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎನ್ ಶ್ರೀನಾಥ್ ಮಾತನಾಡಿ ಸಾರಿಗೆ ಇಲಾಖೆ ಎಂಬುದು ಒಂದು ಕುಟುಂಬ ಇದ್ದಂತೆ ಇಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದಾಗ ಮಾತ್ರವೇ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ರಾಜ್ಯ ಸರಕಾರದ ಶಕ್ತಿ ಯೋಜನೆಯು ಬಂದ ನಂತರದಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಯ ಜವಾಬ್ದಾರಿ ಹೆಚ್ಚಾಗಿದ್ದು ಎಲ್ಲವನ್ನೂ ನಿಭಾಯಿಸಲು ಸಹ ಸಿದ್ದರಾಗಿದ್ದಾರೆ ಇವತ್ತು ನಿವೃತ್ತಿ ಹೊಂದುತ್ತಿರುವರ ಸೇವೆಯೂ ಸಾರಿಗೆ ಸಂಸ್ಥೆಗೆ ಮುಖ್ಯವಾಗಿತ್ತು ಇವರ ನಿವೃತ್ತಿ ಜೀವನವು ಮುಂದಿನ ದಿನಗಳಲ್ಲಿ ಸುಖಕರವಾಗಿರಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನ ಅಧಿಕಾರಿ ಮಂಜುನಾಥ್, ವಿಭಾಗೀಯ ಯಂತ್ರಣಾಧಿಕಾರಿ ನವೀನ್ ಕುಮಾರ್, ಬಸ್ ನಿಲ್ದಾಣಾಧಿಕಾರಿ ಕೆ.ವಿ ಶಿವಕುಮಾರ್, ಡಯಟ್ ಶಿಕ್ಷಣ ಅಧಿಕಾರಿ ಸಿ.ಆರ್ ಅಶೋಕ್, ಸಂಚಾರಿ ನಿಯಂತ್ರಣಾಧಿಕಾರಿಗಳಾದ ರಾಮಮೂರ್ತಿ, ರಮೇಶ್( ದೇವೇಗೌಡ), ಹೆಚ್.ಎಂ ಶ್ರೀನಿವಾಸಮೂರ್ತಿ, ಶ್ರೀನಿವಾಸ್, ರಾಮಮೂರ್ತಿ, ಶ್ಯಾಮೇಗೌಡ, ಶ್ರೀನಿವಾಸಗೌಡ, ವೆಂಕಟೇಶ್ ಗೌಡ, ವಕ್ಕಲೇರಿ ಮಂಜುನಾಥ್, ಜಯಚಂದ್ರ, ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರ ಕುಟುಂಬ ವರ್ಗ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

15 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago