ಕೋಲಾರ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರಿ ನಿಯಂತ್ರಣಾಧಿಕಾರಿಗಳಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರನ್ನು ಬುಧವಾರ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎನ್ ಶ್ರೀನಾಥ್ ಮಾತನಾಡಿ ಸಾರಿಗೆ ಇಲಾಖೆ ಎಂಬುದು ಒಂದು ಕುಟುಂಬ ಇದ್ದಂತೆ ಇಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದಾಗ ಮಾತ್ರವೇ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ರಾಜ್ಯ ಸರಕಾರದ ಶಕ್ತಿ ಯೋಜನೆಯು ಬಂದ ನಂತರದಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಯ ಜವಾಬ್ದಾರಿ ಹೆಚ್ಚಾಗಿದ್ದು ಎಲ್ಲವನ್ನೂ ನಿಭಾಯಿಸಲು ಸಹ ಸಿದ್ದರಾಗಿದ್ದಾರೆ ಇವತ್ತು ನಿವೃತ್ತಿ ಹೊಂದುತ್ತಿರುವರ ಸೇವೆಯೂ ಸಾರಿಗೆ ಸಂಸ್ಥೆಗೆ ಮುಖ್ಯವಾಗಿತ್ತು ಇವರ ನಿವೃತ್ತಿ ಜೀವನವು ಮುಂದಿನ ದಿನಗಳಲ್ಲಿ ಸುಖಕರವಾಗಿರಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನ ಅಧಿಕಾರಿ ಮಂಜುನಾಥ್, ವಿಭಾಗೀಯ ಯಂತ್ರಣಾಧಿಕಾರಿ ನವೀನ್ ಕುಮಾರ್, ಬಸ್ ನಿಲ್ದಾಣಾಧಿಕಾರಿ ಕೆ.ವಿ ಶಿವಕುಮಾರ್, ಡಯಟ್ ಶಿಕ್ಷಣ ಅಧಿಕಾರಿ ಸಿ.ಆರ್ ಅಶೋಕ್, ಸಂಚಾರಿ ನಿಯಂತ್ರಣಾಧಿಕಾರಿಗಳಾದ ರಾಮಮೂರ್ತಿ, ರಮೇಶ್( ದೇವೇಗೌಡ), ಹೆಚ್.ಎಂ ಶ್ರೀನಿವಾಸಮೂರ್ತಿ, ಶ್ರೀನಿವಾಸ್, ರಾಮಮೂರ್ತಿ, ಶ್ಯಾಮೇಗೌಡ, ಶ್ರೀನಿವಾಸಗೌಡ, ವೆಂಕಟೇಶ್ ಗೌಡ, ವಕ್ಕಲೇರಿ ಮಂಜುನಾಥ್, ಜಯಚಂದ್ರ, ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರ ಕುಟುಂಬ ವರ್ಗ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಇದ್ದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…