ಕೋಲಾರ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರಿ ನಿಯಂತ್ರಣಾಧಿಕಾರಿಗಳಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರನ್ನು ಬುಧವಾರ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎನ್ ಶ್ರೀನಾಥ್ ಮಾತನಾಡಿ ಸಾರಿಗೆ ಇಲಾಖೆ ಎಂಬುದು ಒಂದು ಕುಟುಂಬ ಇದ್ದಂತೆ ಇಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದಾಗ ಮಾತ್ರವೇ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ರಾಜ್ಯ ಸರಕಾರದ ಶಕ್ತಿ ಯೋಜನೆಯು ಬಂದ ನಂತರದಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಯ ಜವಾಬ್ದಾರಿ ಹೆಚ್ಚಾಗಿದ್ದು ಎಲ್ಲವನ್ನೂ ನಿಭಾಯಿಸಲು ಸಹ ಸಿದ್ದರಾಗಿದ್ದಾರೆ ಇವತ್ತು ನಿವೃತ್ತಿ ಹೊಂದುತ್ತಿರುವರ ಸೇವೆಯೂ ಸಾರಿಗೆ ಸಂಸ್ಥೆಗೆ ಮುಖ್ಯವಾಗಿತ್ತು ಇವರ ನಿವೃತ್ತಿ ಜೀವನವು ಮುಂದಿನ ದಿನಗಳಲ್ಲಿ ಸುಖಕರವಾಗಿರಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನ ಅಧಿಕಾರಿ ಮಂಜುನಾಥ್, ವಿಭಾಗೀಯ ಯಂತ್ರಣಾಧಿಕಾರಿ ನವೀನ್ ಕುಮಾರ್, ಬಸ್ ನಿಲ್ದಾಣಾಧಿಕಾರಿ ಕೆ.ವಿ ಶಿವಕುಮಾರ್, ಡಯಟ್ ಶಿಕ್ಷಣ ಅಧಿಕಾರಿ ಸಿ.ಆರ್ ಅಶೋಕ್, ಸಂಚಾರಿ ನಿಯಂತ್ರಣಾಧಿಕಾರಿಗಳಾದ ರಾಮಮೂರ್ತಿ, ರಮೇಶ್( ದೇವೇಗೌಡ), ಹೆಚ್.ಎಂ ಶ್ರೀನಿವಾಸಮೂರ್ತಿ, ಶ್ರೀನಿವಾಸ್, ರಾಮಮೂರ್ತಿ, ಶ್ಯಾಮೇಗೌಡ, ಶ್ರೀನಿವಾಸಗೌಡ, ವೆಂಕಟೇಶ್ ಗೌಡ, ವಕ್ಕಲೇರಿ ಮಂಜುನಾಥ್, ಜಯಚಂದ್ರ, ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರ ಕುಟುಂಬ ವರ್ಗ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…