ಕೋಲಾರ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರಿ ನಿಯಂತ್ರಣಾಧಿಕಾರಿಗಳಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರನ್ನು ಬುಧವಾರ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎನ್ ಶ್ರೀನಾಥ್ ಮಾತನಾಡಿ ಸಾರಿಗೆ ಇಲಾಖೆ ಎಂಬುದು ಒಂದು ಕುಟುಂಬ ಇದ್ದಂತೆ ಇಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದಾಗ ಮಾತ್ರವೇ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ರಾಜ್ಯ ಸರಕಾರದ ಶಕ್ತಿ ಯೋಜನೆಯು ಬಂದ ನಂತರದಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಯ ಜವಾಬ್ದಾರಿ ಹೆಚ್ಚಾಗಿದ್ದು ಎಲ್ಲವನ್ನೂ ನಿಭಾಯಿಸಲು ಸಹ ಸಿದ್ದರಾಗಿದ್ದಾರೆ ಇವತ್ತು ನಿವೃತ್ತಿ ಹೊಂದುತ್ತಿರುವರ ಸೇವೆಯೂ ಸಾರಿಗೆ ಸಂಸ್ಥೆಗೆ ಮುಖ್ಯವಾಗಿತ್ತು ಇವರ ನಿವೃತ್ತಿ ಜೀವನವು ಮುಂದಿನ ದಿನಗಳಲ್ಲಿ ಸುಖಕರವಾಗಿರಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನ ಅಧಿಕಾರಿ ಮಂಜುನಾಥ್, ವಿಭಾಗೀಯ ಯಂತ್ರಣಾಧಿಕಾರಿ ನವೀನ್ ಕುಮಾರ್, ಬಸ್ ನಿಲ್ದಾಣಾಧಿಕಾರಿ ಕೆ.ವಿ ಶಿವಕುಮಾರ್, ಡಯಟ್ ಶಿಕ್ಷಣ ಅಧಿಕಾರಿ ಸಿ.ಆರ್ ಅಶೋಕ್, ಸಂಚಾರಿ ನಿಯಂತ್ರಣಾಧಿಕಾರಿಗಳಾದ ರಾಮಮೂರ್ತಿ, ರಮೇಶ್( ದೇವೇಗೌಡ), ಹೆಚ್.ಎಂ ಶ್ರೀನಿವಾಸಮೂರ್ತಿ, ಶ್ರೀನಿವಾಸ್, ರಾಮಮೂರ್ತಿ, ಶ್ಯಾಮೇಗೌಡ, ಶ್ರೀನಿವಾಸಗೌಡ, ವೆಂಕಟೇಶ್ ಗೌಡ, ವಕ್ಕಲೇರಿ ಮಂಜುನಾಥ್, ಜಯಚಂದ್ರ, ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರ ಕುಟುಂಬ ವರ್ಗ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಇದ್ದರು.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…