ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಬೋರ್‌ವೆಲ್ ಪಾಯಿಂಟ್ ಸೇರುತ್ತಿರುವ ಶೌಚಾಲಯದ ಮಲ-ಮೂತ್ರ ಮಿಶ್ರಿತ ನೀರು

ನಗರದ ಹೈಟೆಕ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯದ ನೀರು ನೇರವಾಗಿ ಕುಡಿಯುವ ನೀರಿಗೆ ಬಳಸುವ ಬೋರ್‌ವೇಲ್‌ಗೆ ಸೇರುತ್ತಿದೆ. ಈ ಬೋರ್‌ವೇಲ್ ನೀರನ್ನು ಪ್ರಯಾಣಿಕರು ಮತ್ತು ಸಂಸ್ಥೆಯ ಸಿಬ್ಬಂದಿಗಳು ಬಳಸುತ್ತಿದ್ದಾರೆ. ಮುಖ್ಯವಾಗಿ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿರುವ ಉಚಿತ ಕುಡಿಯುವ ನೀರಿನ ಟ್ಯಾಂಕ್‌ರಗೂ ಇದೇ ನೀರನ್ನೇ ಬಳಸಲಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದ್ದರೂ ಕೆಎಸ್‌ಆರ್‌ಟಿಸಿ ಸಂಸ್ಥೆ ಕ್ರಮಕ್ಕೆ ಮುಂದಾಗಿಲ್ಲ.

ಕುಡಿಯುವ ಟ್ಯಾಂಕರ್‌ಗೆ ಮಲ-ಮೂತ್ರ ಮಿಶ್ರಿತ ನೀರು:

ನಗರದ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಇದ್ದು, ಪ್ರತಿದಿನ 300ಕ್ಕೂ ಹೆಚ್ಚು ಬಸ್‌ಗಳ ಸಂಚಾರವಿದೆ. ಹೈಟೆಕ್ ಬಸ್ ನಿಲ್ದಾಣದಲ್ಲಿ ಪುರಷ ಮತ್ತು ಮಹಿಳೆಯರ ಬಳಕೆಗಾಗಿ 10 ಶೌಚಾಲಯಗಳಿವೆ. ಈ ಶೌಚಾಲಯಗಳಿಂದ ಬರುವ ಮಲ ಮತ್ತು ಮೂತ್ರದ ನೀರು ಸರಾಗವಾಗಿ ಹೋಗುತ್ತಿಲ್ಲ. ಬದಲಾಗಿ ಕೆಎಸ್‌ಆರ್‌ಟಿಸಿಯವರ ಏಕೈಕ ಬೋರ್‌ವೆಲ್ ಪಾಯಿಂಟ್ ಬಳಿ ಸಂಗ್ರಹವಾಗುತ್ತಿದೆ. ಈ ಮಲ-ಮೂತ್ರ ಮಿಶ್ರಿತ ನೀರು ಮತ್ತೆ ಬೋರ್‌ವೆಲ್ ಸೇರುತ್ತಿದೆ. ಇದೇ ಬೋರ್‌ವೆಲ್ ನೀರನ್ನು ಬಸ್ ನಿಲ್ದಾಣದಲ್ಲಿರುವ ಹೊಟೇಲ್ ಮತ್ತು ಕಾಂಡಿಮಂಟ್ಸ್ ಗಳಿಗೆ ಸರಬರಾಜು ಮಾಡಲಾಗುತ್ತಿದೆ, ಚಾಲಕ ಮತ್ತು ನಿರ್ವಾಹಕರು ಇದೇ ನೀರನ್ನು ಬಳಸುತ್ತಿದ್ದಾರೆ. ಮುಖ್ಯವಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಕುಡಿಯುವ ನೀರಿನ ಟ್ಯಾಂಕರ್‌ಗೂ ಸಹ ಇದೇ ನೀರನ್ನು ಬಿಡಲಾಗುತ್ತಿದೆ.

ಗಬ್ಬು ನಾರುತ್ತಿರುವ ಪಾರ್ಕಿಂಗ್ ಸ್ಥಳ:

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯಗಳ ಪೈಪ್‌ಗಳು ಹೊಡೆದು ಹೋಗಿದ್ದು, ಈ ಪೈಪ್‌ಗಳಿಂದ ಸೋರಿಕೆಯಾಗುತ್ತಿರುವ ನೀರು ನೇರವಾಗಿ ದ್ವಿಚಕ್ರ ಮತ್ತು ಕಾರುಗಳ ಪಾರ್ಕಿಂಗ್ ಪ್ರದೇಶ ಸೇರುತ್ತಿದೆ. ಇದರಿಂದ ಇಲ್ಲಿಗೆ ಪಾರ್ಕಿಂಗ್ ಮಾಡಲು ಬರುವ ಬೈಕ್ ಸವಾರರ ಸಂಖ್ಯೆಯೂ ಕಡಿಮೆಯಾಗಿದೆ. ಗಬ್ಬು ನಾರುತ್ತಿರುವುದರಿಂದ ಸೊಳ್ಳೆಕಾಟವೂ ಹೆಚ್ಚಾಗಿದೆ.

ದೂರು ನೀಡಿದರೂ ಕ್ರಮವಿಲ್ಲ:

ಅಂಬರೀಶ್ ಎಂಬುವರು ಬಸ್ ನಿಲ್ದಾಣದ ಪಾರ್ಕಿಂಗ್ ಟೆಂಡರ್ ತೆಗೆದು ಕೊಂಡಿದ್ದಾರೆ. ಪ್ರತಿ ತಿಂಗಳು ೬೦ ಸಾವಿರ ಹಣವನ್ನು ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಬಾಡಿಗೆ ಕಟ್ಟುತ್ತಿದ್ದಾರೆ. ಪಾರ್ಕಿಂಗ್ ಪ್ರದೇಶ ಸ್ವಚ್ಛ ಮಾಡುವಂತೆ ಮತ್ತು ಬೋರ್‌ವೆಲ್ ಸೇರುತ್ತಿರುವ ಶೌಚಾಲಯದ ನೀರಿನ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಪ್ರಯಾಣಿಕರ ಆಕ್ರೋಶ :

ಪ್ರಯಾಣಿಕರಿಗೆ ಮತ್ತು ಸಂಸ್ಥೆಯ ಸಿಬ್ಬಂದಿಗಳಿಗೆ ಶುದ್ಧವಾದ ಮತ್ತು ಸ್ವಚ್ಚವಾದ ನೀರು ಕೊಡುವುದು ಕೆಎಸ್‌ಆರ್‌ಟಿಸಿಯ ಜವಾಬ್ದಾರಿಯಾಗಿದೆ ಆದರೆ ಸಂಬAಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುವ ಮೂಲಕ ಪ್ರಯಾಣಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

11 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

12 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

12 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

13 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

20 hours ago

ಅನ್ನದಾತ ಅನಾಥನಾಗುವ ಮುನ್ನ……. ಅನ್ನಕ್ಕಾಗಿ ನಾವು ಪರದಾಡುವ ಮುನ್ನ……

ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…

24 hours ago