ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಬೋರ್‌ವೆಲ್ ಪಾಯಿಂಟ್ ಸೇರುತ್ತಿರುವ ಶೌಚಾಲಯದ ಮಲ-ಮೂತ್ರ ಮಿಶ್ರಿತ ನೀರು

ನಗರದ ಹೈಟೆಕ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯದ ನೀರು ನೇರವಾಗಿ ಕುಡಿಯುವ ನೀರಿಗೆ ಬಳಸುವ ಬೋರ್‌ವೇಲ್‌ಗೆ ಸೇರುತ್ತಿದೆ. ಈ ಬೋರ್‌ವೇಲ್ ನೀರನ್ನು ಪ್ರಯಾಣಿಕರು ಮತ್ತು ಸಂಸ್ಥೆಯ ಸಿಬ್ಬಂದಿಗಳು ಬಳಸುತ್ತಿದ್ದಾರೆ. ಮುಖ್ಯವಾಗಿ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿರುವ ಉಚಿತ ಕುಡಿಯುವ ನೀರಿನ ಟ್ಯಾಂಕ್‌ರಗೂ ಇದೇ ನೀರನ್ನೇ ಬಳಸಲಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದ್ದರೂ ಕೆಎಸ್‌ಆರ್‌ಟಿಸಿ ಸಂಸ್ಥೆ ಕ್ರಮಕ್ಕೆ ಮುಂದಾಗಿಲ್ಲ.

ಕುಡಿಯುವ ಟ್ಯಾಂಕರ್‌ಗೆ ಮಲ-ಮೂತ್ರ ಮಿಶ್ರಿತ ನೀರು:

ನಗರದ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಇದ್ದು, ಪ್ರತಿದಿನ 300ಕ್ಕೂ ಹೆಚ್ಚು ಬಸ್‌ಗಳ ಸಂಚಾರವಿದೆ. ಹೈಟೆಕ್ ಬಸ್ ನಿಲ್ದಾಣದಲ್ಲಿ ಪುರಷ ಮತ್ತು ಮಹಿಳೆಯರ ಬಳಕೆಗಾಗಿ 10 ಶೌಚಾಲಯಗಳಿವೆ. ಈ ಶೌಚಾಲಯಗಳಿಂದ ಬರುವ ಮಲ ಮತ್ತು ಮೂತ್ರದ ನೀರು ಸರಾಗವಾಗಿ ಹೋಗುತ್ತಿಲ್ಲ. ಬದಲಾಗಿ ಕೆಎಸ್‌ಆರ್‌ಟಿಸಿಯವರ ಏಕೈಕ ಬೋರ್‌ವೆಲ್ ಪಾಯಿಂಟ್ ಬಳಿ ಸಂಗ್ರಹವಾಗುತ್ತಿದೆ. ಈ ಮಲ-ಮೂತ್ರ ಮಿಶ್ರಿತ ನೀರು ಮತ್ತೆ ಬೋರ್‌ವೆಲ್ ಸೇರುತ್ತಿದೆ. ಇದೇ ಬೋರ್‌ವೆಲ್ ನೀರನ್ನು ಬಸ್ ನಿಲ್ದಾಣದಲ್ಲಿರುವ ಹೊಟೇಲ್ ಮತ್ತು ಕಾಂಡಿಮಂಟ್ಸ್ ಗಳಿಗೆ ಸರಬರಾಜು ಮಾಡಲಾಗುತ್ತಿದೆ, ಚಾಲಕ ಮತ್ತು ನಿರ್ವಾಹಕರು ಇದೇ ನೀರನ್ನು ಬಳಸುತ್ತಿದ್ದಾರೆ. ಮುಖ್ಯವಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಕುಡಿಯುವ ನೀರಿನ ಟ್ಯಾಂಕರ್‌ಗೂ ಸಹ ಇದೇ ನೀರನ್ನು ಬಿಡಲಾಗುತ್ತಿದೆ.

ಗಬ್ಬು ನಾರುತ್ತಿರುವ ಪಾರ್ಕಿಂಗ್ ಸ್ಥಳ:

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯಗಳ ಪೈಪ್‌ಗಳು ಹೊಡೆದು ಹೋಗಿದ್ದು, ಈ ಪೈಪ್‌ಗಳಿಂದ ಸೋರಿಕೆಯಾಗುತ್ತಿರುವ ನೀರು ನೇರವಾಗಿ ದ್ವಿಚಕ್ರ ಮತ್ತು ಕಾರುಗಳ ಪಾರ್ಕಿಂಗ್ ಪ್ರದೇಶ ಸೇರುತ್ತಿದೆ. ಇದರಿಂದ ಇಲ್ಲಿಗೆ ಪಾರ್ಕಿಂಗ್ ಮಾಡಲು ಬರುವ ಬೈಕ್ ಸವಾರರ ಸಂಖ್ಯೆಯೂ ಕಡಿಮೆಯಾಗಿದೆ. ಗಬ್ಬು ನಾರುತ್ತಿರುವುದರಿಂದ ಸೊಳ್ಳೆಕಾಟವೂ ಹೆಚ್ಚಾಗಿದೆ.

ದೂರು ನೀಡಿದರೂ ಕ್ರಮವಿಲ್ಲ:

ಅಂಬರೀಶ್ ಎಂಬುವರು ಬಸ್ ನಿಲ್ದಾಣದ ಪಾರ್ಕಿಂಗ್ ಟೆಂಡರ್ ತೆಗೆದು ಕೊಂಡಿದ್ದಾರೆ. ಪ್ರತಿ ತಿಂಗಳು ೬೦ ಸಾವಿರ ಹಣವನ್ನು ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಬಾಡಿಗೆ ಕಟ್ಟುತ್ತಿದ್ದಾರೆ. ಪಾರ್ಕಿಂಗ್ ಪ್ರದೇಶ ಸ್ವಚ್ಛ ಮಾಡುವಂತೆ ಮತ್ತು ಬೋರ್‌ವೆಲ್ ಸೇರುತ್ತಿರುವ ಶೌಚಾಲಯದ ನೀರಿನ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಪ್ರಯಾಣಿಕರ ಆಕ್ರೋಶ :

ಪ್ರಯಾಣಿಕರಿಗೆ ಮತ್ತು ಸಂಸ್ಥೆಯ ಸಿಬ್ಬಂದಿಗಳಿಗೆ ಶುದ್ಧವಾದ ಮತ್ತು ಸ್ವಚ್ಚವಾದ ನೀರು ಕೊಡುವುದು ಕೆಎಸ್‌ಆರ್‌ಟಿಸಿಯ ಜವಾಬ್ದಾರಿಯಾಗಿದೆ ಆದರೆ ಸಂಬAಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುವ ಮೂಲಕ ಪ್ರಯಾಣಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

46 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago