ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಬೋರ್‌ವೆಲ್ ಪಾಯಿಂಟ್ ಸೇರುತ್ತಿರುವ ಶೌಚಾಲಯದ ಮಲ-ಮೂತ್ರ ಮಿಶ್ರಿತ ನೀರು

ನಗರದ ಹೈಟೆಕ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯದ ನೀರು ನೇರವಾಗಿ ಕುಡಿಯುವ ನೀರಿಗೆ ಬಳಸುವ ಬೋರ್‌ವೇಲ್‌ಗೆ ಸೇರುತ್ತಿದೆ. ಈ ಬೋರ್‌ವೇಲ್ ನೀರನ್ನು ಪ್ರಯಾಣಿಕರು ಮತ್ತು ಸಂಸ್ಥೆಯ ಸಿಬ್ಬಂದಿಗಳು ಬಳಸುತ್ತಿದ್ದಾರೆ. ಮುಖ್ಯವಾಗಿ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿರುವ ಉಚಿತ ಕುಡಿಯುವ ನೀರಿನ ಟ್ಯಾಂಕ್‌ರಗೂ ಇದೇ ನೀರನ್ನೇ ಬಳಸಲಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದ್ದರೂ ಕೆಎಸ್‌ಆರ್‌ಟಿಸಿ ಸಂಸ್ಥೆ ಕ್ರಮಕ್ಕೆ ಮುಂದಾಗಿಲ್ಲ.

ಕುಡಿಯುವ ಟ್ಯಾಂಕರ್‌ಗೆ ಮಲ-ಮೂತ್ರ ಮಿಶ್ರಿತ ನೀರು:

ನಗರದ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಇದ್ದು, ಪ್ರತಿದಿನ 300ಕ್ಕೂ ಹೆಚ್ಚು ಬಸ್‌ಗಳ ಸಂಚಾರವಿದೆ. ಹೈಟೆಕ್ ಬಸ್ ನಿಲ್ದಾಣದಲ್ಲಿ ಪುರಷ ಮತ್ತು ಮಹಿಳೆಯರ ಬಳಕೆಗಾಗಿ 10 ಶೌಚಾಲಯಗಳಿವೆ. ಈ ಶೌಚಾಲಯಗಳಿಂದ ಬರುವ ಮಲ ಮತ್ತು ಮೂತ್ರದ ನೀರು ಸರಾಗವಾಗಿ ಹೋಗುತ್ತಿಲ್ಲ. ಬದಲಾಗಿ ಕೆಎಸ್‌ಆರ್‌ಟಿಸಿಯವರ ಏಕೈಕ ಬೋರ್‌ವೆಲ್ ಪಾಯಿಂಟ್ ಬಳಿ ಸಂಗ್ರಹವಾಗುತ್ತಿದೆ. ಈ ಮಲ-ಮೂತ್ರ ಮಿಶ್ರಿತ ನೀರು ಮತ್ತೆ ಬೋರ್‌ವೆಲ್ ಸೇರುತ್ತಿದೆ. ಇದೇ ಬೋರ್‌ವೆಲ್ ನೀರನ್ನು ಬಸ್ ನಿಲ್ದಾಣದಲ್ಲಿರುವ ಹೊಟೇಲ್ ಮತ್ತು ಕಾಂಡಿಮಂಟ್ಸ್ ಗಳಿಗೆ ಸರಬರಾಜು ಮಾಡಲಾಗುತ್ತಿದೆ, ಚಾಲಕ ಮತ್ತು ನಿರ್ವಾಹಕರು ಇದೇ ನೀರನ್ನು ಬಳಸುತ್ತಿದ್ದಾರೆ. ಮುಖ್ಯವಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಕುಡಿಯುವ ನೀರಿನ ಟ್ಯಾಂಕರ್‌ಗೂ ಸಹ ಇದೇ ನೀರನ್ನು ಬಿಡಲಾಗುತ್ತಿದೆ.

ಗಬ್ಬು ನಾರುತ್ತಿರುವ ಪಾರ್ಕಿಂಗ್ ಸ್ಥಳ:

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯಗಳ ಪೈಪ್‌ಗಳು ಹೊಡೆದು ಹೋಗಿದ್ದು, ಈ ಪೈಪ್‌ಗಳಿಂದ ಸೋರಿಕೆಯಾಗುತ್ತಿರುವ ನೀರು ನೇರವಾಗಿ ದ್ವಿಚಕ್ರ ಮತ್ತು ಕಾರುಗಳ ಪಾರ್ಕಿಂಗ್ ಪ್ರದೇಶ ಸೇರುತ್ತಿದೆ. ಇದರಿಂದ ಇಲ್ಲಿಗೆ ಪಾರ್ಕಿಂಗ್ ಮಾಡಲು ಬರುವ ಬೈಕ್ ಸವಾರರ ಸಂಖ್ಯೆಯೂ ಕಡಿಮೆಯಾಗಿದೆ. ಗಬ್ಬು ನಾರುತ್ತಿರುವುದರಿಂದ ಸೊಳ್ಳೆಕಾಟವೂ ಹೆಚ್ಚಾಗಿದೆ.

ದೂರು ನೀಡಿದರೂ ಕ್ರಮವಿಲ್ಲ:

ಅಂಬರೀಶ್ ಎಂಬುವರು ಬಸ್ ನಿಲ್ದಾಣದ ಪಾರ್ಕಿಂಗ್ ಟೆಂಡರ್ ತೆಗೆದು ಕೊಂಡಿದ್ದಾರೆ. ಪ್ರತಿ ತಿಂಗಳು ೬೦ ಸಾವಿರ ಹಣವನ್ನು ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಬಾಡಿಗೆ ಕಟ್ಟುತ್ತಿದ್ದಾರೆ. ಪಾರ್ಕಿಂಗ್ ಪ್ರದೇಶ ಸ್ವಚ್ಛ ಮಾಡುವಂತೆ ಮತ್ತು ಬೋರ್‌ವೆಲ್ ಸೇರುತ್ತಿರುವ ಶೌಚಾಲಯದ ನೀರಿನ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಪ್ರಯಾಣಿಕರ ಆಕ್ರೋಶ :

ಪ್ರಯಾಣಿಕರಿಗೆ ಮತ್ತು ಸಂಸ್ಥೆಯ ಸಿಬ್ಬಂದಿಗಳಿಗೆ ಶುದ್ಧವಾದ ಮತ್ತು ಸ್ವಚ್ಚವಾದ ನೀರು ಕೊಡುವುದು ಕೆಎಸ್‌ಆರ್‌ಟಿಸಿಯ ಜವಾಬ್ದಾರಿಯಾಗಿದೆ ಆದರೆ ಸಂಬAಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುವ ಮೂಲಕ ಪ್ರಯಾಣಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

13 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago