ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಬೋರ್‌ವೆಲ್ ಪಾಯಿಂಟ್ ಸೇರುತ್ತಿರುವ ಶೌಚಾಲಯದ ಮಲ-ಮೂತ್ರ ಮಿಶ್ರಿತ ನೀರು

ನಗರದ ಹೈಟೆಕ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯದ ನೀರು ನೇರವಾಗಿ ಕುಡಿಯುವ ನೀರಿಗೆ ಬಳಸುವ ಬೋರ್‌ವೇಲ್‌ಗೆ ಸೇರುತ್ತಿದೆ. ಈ ಬೋರ್‌ವೇಲ್ ನೀರನ್ನು ಪ್ರಯಾಣಿಕರು ಮತ್ತು ಸಂಸ್ಥೆಯ ಸಿಬ್ಬಂದಿಗಳು ಬಳಸುತ್ತಿದ್ದಾರೆ. ಮುಖ್ಯವಾಗಿ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿರುವ ಉಚಿತ ಕುಡಿಯುವ ನೀರಿನ ಟ್ಯಾಂಕ್‌ರಗೂ ಇದೇ ನೀರನ್ನೇ ಬಳಸಲಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದ್ದರೂ ಕೆಎಸ್‌ಆರ್‌ಟಿಸಿ ಸಂಸ್ಥೆ ಕ್ರಮಕ್ಕೆ ಮುಂದಾಗಿಲ್ಲ.

ಕುಡಿಯುವ ಟ್ಯಾಂಕರ್‌ಗೆ ಮಲ-ಮೂತ್ರ ಮಿಶ್ರಿತ ನೀರು:

ನಗರದ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಇದ್ದು, ಪ್ರತಿದಿನ 300ಕ್ಕೂ ಹೆಚ್ಚು ಬಸ್‌ಗಳ ಸಂಚಾರವಿದೆ. ಹೈಟೆಕ್ ಬಸ್ ನಿಲ್ದಾಣದಲ್ಲಿ ಪುರಷ ಮತ್ತು ಮಹಿಳೆಯರ ಬಳಕೆಗಾಗಿ 10 ಶೌಚಾಲಯಗಳಿವೆ. ಈ ಶೌಚಾಲಯಗಳಿಂದ ಬರುವ ಮಲ ಮತ್ತು ಮೂತ್ರದ ನೀರು ಸರಾಗವಾಗಿ ಹೋಗುತ್ತಿಲ್ಲ. ಬದಲಾಗಿ ಕೆಎಸ್‌ಆರ್‌ಟಿಸಿಯವರ ಏಕೈಕ ಬೋರ್‌ವೆಲ್ ಪಾಯಿಂಟ್ ಬಳಿ ಸಂಗ್ರಹವಾಗುತ್ತಿದೆ. ಈ ಮಲ-ಮೂತ್ರ ಮಿಶ್ರಿತ ನೀರು ಮತ್ತೆ ಬೋರ್‌ವೆಲ್ ಸೇರುತ್ತಿದೆ. ಇದೇ ಬೋರ್‌ವೆಲ್ ನೀರನ್ನು ಬಸ್ ನಿಲ್ದಾಣದಲ್ಲಿರುವ ಹೊಟೇಲ್ ಮತ್ತು ಕಾಂಡಿಮಂಟ್ಸ್ ಗಳಿಗೆ ಸರಬರಾಜು ಮಾಡಲಾಗುತ್ತಿದೆ, ಚಾಲಕ ಮತ್ತು ನಿರ್ವಾಹಕರು ಇದೇ ನೀರನ್ನು ಬಳಸುತ್ತಿದ್ದಾರೆ. ಮುಖ್ಯವಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಕುಡಿಯುವ ನೀರಿನ ಟ್ಯಾಂಕರ್‌ಗೂ ಸಹ ಇದೇ ನೀರನ್ನು ಬಿಡಲಾಗುತ್ತಿದೆ.

ಗಬ್ಬು ನಾರುತ್ತಿರುವ ಪಾರ್ಕಿಂಗ್ ಸ್ಥಳ:

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯಗಳ ಪೈಪ್‌ಗಳು ಹೊಡೆದು ಹೋಗಿದ್ದು, ಈ ಪೈಪ್‌ಗಳಿಂದ ಸೋರಿಕೆಯಾಗುತ್ತಿರುವ ನೀರು ನೇರವಾಗಿ ದ್ವಿಚಕ್ರ ಮತ್ತು ಕಾರುಗಳ ಪಾರ್ಕಿಂಗ್ ಪ್ರದೇಶ ಸೇರುತ್ತಿದೆ. ಇದರಿಂದ ಇಲ್ಲಿಗೆ ಪಾರ್ಕಿಂಗ್ ಮಾಡಲು ಬರುವ ಬೈಕ್ ಸವಾರರ ಸಂಖ್ಯೆಯೂ ಕಡಿಮೆಯಾಗಿದೆ. ಗಬ್ಬು ನಾರುತ್ತಿರುವುದರಿಂದ ಸೊಳ್ಳೆಕಾಟವೂ ಹೆಚ್ಚಾಗಿದೆ.

ದೂರು ನೀಡಿದರೂ ಕ್ರಮವಿಲ್ಲ:

ಅಂಬರೀಶ್ ಎಂಬುವರು ಬಸ್ ನಿಲ್ದಾಣದ ಪಾರ್ಕಿಂಗ್ ಟೆಂಡರ್ ತೆಗೆದು ಕೊಂಡಿದ್ದಾರೆ. ಪ್ರತಿ ತಿಂಗಳು ೬೦ ಸಾವಿರ ಹಣವನ್ನು ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಬಾಡಿಗೆ ಕಟ್ಟುತ್ತಿದ್ದಾರೆ. ಪಾರ್ಕಿಂಗ್ ಪ್ರದೇಶ ಸ್ವಚ್ಛ ಮಾಡುವಂತೆ ಮತ್ತು ಬೋರ್‌ವೆಲ್ ಸೇರುತ್ತಿರುವ ಶೌಚಾಲಯದ ನೀರಿನ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಪ್ರಯಾಣಿಕರ ಆಕ್ರೋಶ :

ಪ್ರಯಾಣಿಕರಿಗೆ ಮತ್ತು ಸಂಸ್ಥೆಯ ಸಿಬ್ಬಂದಿಗಳಿಗೆ ಶುದ್ಧವಾದ ಮತ್ತು ಸ್ವಚ್ಚವಾದ ನೀರು ಕೊಡುವುದು ಕೆಎಸ್‌ಆರ್‌ಟಿಸಿಯ ಜವಾಬ್ದಾರಿಯಾಗಿದೆ ಆದರೆ ಸಂಬAಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುವ ಮೂಲಕ ಪ್ರಯಾಣಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

4 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

5 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

5 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

5 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

7 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

11 hours ago