ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಬೋರ್‌ವೆಲ್ ಪಾಯಿಂಟ್ ಸೇರುತ್ತಿರುವ ಶೌಚಾಲಯದ ಮಲ-ಮೂತ್ರ ಮಿಶ್ರಿತ ನೀರು

ನಗರದ ಹೈಟೆಕ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯದ ನೀರು ನೇರವಾಗಿ ಕುಡಿಯುವ ನೀರಿಗೆ ಬಳಸುವ ಬೋರ್‌ವೇಲ್‌ಗೆ ಸೇರುತ್ತಿದೆ. ಈ ಬೋರ್‌ವೇಲ್ ನೀರನ್ನು ಪ್ರಯಾಣಿಕರು ಮತ್ತು ಸಂಸ್ಥೆಯ ಸಿಬ್ಬಂದಿಗಳು ಬಳಸುತ್ತಿದ್ದಾರೆ. ಮುಖ್ಯವಾಗಿ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿರುವ ಉಚಿತ ಕುಡಿಯುವ ನೀರಿನ ಟ್ಯಾಂಕ್‌ರಗೂ ಇದೇ ನೀರನ್ನೇ ಬಳಸಲಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದ್ದರೂ ಕೆಎಸ್‌ಆರ್‌ಟಿಸಿ ಸಂಸ್ಥೆ ಕ್ರಮಕ್ಕೆ ಮುಂದಾಗಿಲ್ಲ.

ಕುಡಿಯುವ ಟ್ಯಾಂಕರ್‌ಗೆ ಮಲ-ಮೂತ್ರ ಮಿಶ್ರಿತ ನೀರು:

ನಗರದ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಇದ್ದು, ಪ್ರತಿದಿನ 300ಕ್ಕೂ ಹೆಚ್ಚು ಬಸ್‌ಗಳ ಸಂಚಾರವಿದೆ. ಹೈಟೆಕ್ ಬಸ್ ನಿಲ್ದಾಣದಲ್ಲಿ ಪುರಷ ಮತ್ತು ಮಹಿಳೆಯರ ಬಳಕೆಗಾಗಿ 10 ಶೌಚಾಲಯಗಳಿವೆ. ಈ ಶೌಚಾಲಯಗಳಿಂದ ಬರುವ ಮಲ ಮತ್ತು ಮೂತ್ರದ ನೀರು ಸರಾಗವಾಗಿ ಹೋಗುತ್ತಿಲ್ಲ. ಬದಲಾಗಿ ಕೆಎಸ್‌ಆರ್‌ಟಿಸಿಯವರ ಏಕೈಕ ಬೋರ್‌ವೆಲ್ ಪಾಯಿಂಟ್ ಬಳಿ ಸಂಗ್ರಹವಾಗುತ್ತಿದೆ. ಈ ಮಲ-ಮೂತ್ರ ಮಿಶ್ರಿತ ನೀರು ಮತ್ತೆ ಬೋರ್‌ವೆಲ್ ಸೇರುತ್ತಿದೆ. ಇದೇ ಬೋರ್‌ವೆಲ್ ನೀರನ್ನು ಬಸ್ ನಿಲ್ದಾಣದಲ್ಲಿರುವ ಹೊಟೇಲ್ ಮತ್ತು ಕಾಂಡಿಮಂಟ್ಸ್ ಗಳಿಗೆ ಸರಬರಾಜು ಮಾಡಲಾಗುತ್ತಿದೆ, ಚಾಲಕ ಮತ್ತು ನಿರ್ವಾಹಕರು ಇದೇ ನೀರನ್ನು ಬಳಸುತ್ತಿದ್ದಾರೆ. ಮುಖ್ಯವಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಕುಡಿಯುವ ನೀರಿನ ಟ್ಯಾಂಕರ್‌ಗೂ ಸಹ ಇದೇ ನೀರನ್ನು ಬಿಡಲಾಗುತ್ತಿದೆ.

ಗಬ್ಬು ನಾರುತ್ತಿರುವ ಪಾರ್ಕಿಂಗ್ ಸ್ಥಳ:

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯಗಳ ಪೈಪ್‌ಗಳು ಹೊಡೆದು ಹೋಗಿದ್ದು, ಈ ಪೈಪ್‌ಗಳಿಂದ ಸೋರಿಕೆಯಾಗುತ್ತಿರುವ ನೀರು ನೇರವಾಗಿ ದ್ವಿಚಕ್ರ ಮತ್ತು ಕಾರುಗಳ ಪಾರ್ಕಿಂಗ್ ಪ್ರದೇಶ ಸೇರುತ್ತಿದೆ. ಇದರಿಂದ ಇಲ್ಲಿಗೆ ಪಾರ್ಕಿಂಗ್ ಮಾಡಲು ಬರುವ ಬೈಕ್ ಸವಾರರ ಸಂಖ್ಯೆಯೂ ಕಡಿಮೆಯಾಗಿದೆ. ಗಬ್ಬು ನಾರುತ್ತಿರುವುದರಿಂದ ಸೊಳ್ಳೆಕಾಟವೂ ಹೆಚ್ಚಾಗಿದೆ.

ದೂರು ನೀಡಿದರೂ ಕ್ರಮವಿಲ್ಲ:

ಅಂಬರೀಶ್ ಎಂಬುವರು ಬಸ್ ನಿಲ್ದಾಣದ ಪಾರ್ಕಿಂಗ್ ಟೆಂಡರ್ ತೆಗೆದು ಕೊಂಡಿದ್ದಾರೆ. ಪ್ರತಿ ತಿಂಗಳು ೬೦ ಸಾವಿರ ಹಣವನ್ನು ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಬಾಡಿಗೆ ಕಟ್ಟುತ್ತಿದ್ದಾರೆ. ಪಾರ್ಕಿಂಗ್ ಪ್ರದೇಶ ಸ್ವಚ್ಛ ಮಾಡುವಂತೆ ಮತ್ತು ಬೋರ್‌ವೆಲ್ ಸೇರುತ್ತಿರುವ ಶೌಚಾಲಯದ ನೀರಿನ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಪ್ರಯಾಣಿಕರ ಆಕ್ರೋಶ :

ಪ್ರಯಾಣಿಕರಿಗೆ ಮತ್ತು ಸಂಸ್ಥೆಯ ಸಿಬ್ಬಂದಿಗಳಿಗೆ ಶುದ್ಧವಾದ ಮತ್ತು ಸ್ವಚ್ಚವಾದ ನೀರು ಕೊಡುವುದು ಕೆಎಸ್‌ಆರ್‌ಟಿಸಿಯ ಜವಾಬ್ದಾರಿಯಾಗಿದೆ ಆದರೆ ಸಂಬAಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ನುಣಿಚಿಕೊಳ್ಳುವ ಮೂಲಕ ಪ್ರಯಾಣಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

36 minutes ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

7 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

10 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

13 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago