ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪದ ಕೆಎಸ್ಆರ್ ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ತೆರೆಯಲು ಅವಕಾಶ ನೀಡಬಾರದು. ಈ ಬಸ್ ನಿಲ್ದಾಣದಿಂದ ನಗರ ಸಾರಿಗೆ ಸೇರಿದಂತೆ ಗ್ರಾಮೀಣ ಪ್ರದೇಶಗಳ ಕಡೆಗೆ ಸಂಚರಿಸುವ ಬಸ್ ಗಳ ಸೇವೆಯನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ವತಿಯಿಂದ ಗುರುವಾರ ಕೆಎಸ್ ಆರ್ ಟಿಸಿ ಬಸ್ ಡಿಪೋ ವ್ಯವಸ್ಥಾಪಕ ಎಸ್.ಆರ್ ಸಂತೋಷ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಬಸ್ ನಿಲ್ದಾಣದಿಂದ ಗ್ರಾಮಾಂತರ ಪ್ರದೇಶದ ರೈತರು, ವಿದ್ಯಾರ್ಥಿಗಳು ಈ ಭಾಗದಲ್ಲಿ ಕಾಲೇಜು, ಸರ್ಕಾರಿ ಕಚೇರಿಗಳು, ಪೊಲೀಸ್ ಠಾಣೆ, ಎಪಿಎಂಸಿ, ಕ್ರೀಡಾಂಗಣ, ಅಂಚೆ ಕಚೇರಿ, ನಗರಸಭೆ ಕೋರ್ಟ್ ಸೇರಿದಂತೆ ದೈನಂದಿನ ಕೆಲಸಕ್ಕೆ ಬಂದು ಹೋಗುವ ಎಲ್ಲಾ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.
ಅದೇರೀತಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸದೆ ಬಸ್ ನಿಲ್ದಾಣವನ್ನಾಗಿಯೇ ಮುಂದುವರಿಸಬೇಕು. ಬೇರೆ ಉದ್ದೇಶಕ್ಕೆ ಅನುವು ಮಾಡಿಕೊಟ್ಟಿದ್ದೆ ಆದಲ್ಲಿ ದೊಡ್ಡಬಳ್ಳಾಪುರದ ನಾಗರೀಕರ ಪರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ಚಿಂತಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಇದಕ್ಕೆ ಆಸ್ಪದ ನೀಡದೆ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮಾಡಿ ಉಳಿಸಿಕೊಂಡು, ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯರ್ದರ್ಶಿ ರಮೇಶ್ ಇದ್ದರು.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…