ಕೆಎಸ್ಆರ್ ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ತೆರೆಯುವುದಕ್ಕೆ ವಿರೋಧ

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪದ ಕೆಎಸ್ಆರ್ ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ತೆರೆಯಲು ಅವಕಾಶ ನೀಡಬಾರದು. ಈ ಬಸ್ ನಿಲ್ದಾಣದಿಂದ ನಗರ ಸಾರಿಗೆ ಸೇರಿದಂತೆ ಗ್ರಾಮೀಣ ಪ್ರದೇಶಗಳ ಕಡೆಗೆ ಸಂಚರಿಸುವ ಬಸ್ ಗಳ ಸೇವೆಯನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ವತಿಯಿಂದ ಗುರುವಾರ ಕೆಎಸ್ ಆರ್ ಟಿಸಿ ಬಸ್ ಡಿಪೋ ವ್ಯವಸ್ಥಾಪಕ ಎಸ್.ಆರ್ ಸಂತೋಷ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಬಗ್ಗೆ ಮಾಹಿತಿ ನೀಡಿದ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ವೇಗವಾಗಿ ಬೆಳೆಯುತ್ತಿರುವ ನಗರಕ್ಕೆ ನಗರ ಸಾರಿಗೆ ಬಸ್ ಸೇವೆಯ ಅಗತ್ಯ ಇದೆ. ನಗರದ ಮಧ್ಯಭಾಗದಲ್ಲಿ ಈಗ ಇರುವ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸಾರ್ವಜನಿಕರು ಹೋಗಿ ಬರಲು ಸಂಚಾರ ದಟ್ಟಣೆ ಮಿತಿ ಮೀರಿ ಹೋಗಿದೆ. ಅತ್ಯಂತ ಕಿರಿದಾದ ರಸ್ತೆಗಳು ಇರುವ ಕಾರಣದಿಂದಾಗಿ ಬಸ್ ಗಳು ಸಹ ಸಂಚರಿಸಲು ಕಷ್ಟವಾಗಿದೆ. ಈ ಎಲ್ಲಾ ಕಾರಣದಿಂದ ನಗರದ ಹೊರಭಾಗದಲ್ಲಿ ಹಿರಿಯ ರಾಜಕಾರಣಿ ಆರ್.ಎಲ್.ಜಾಲಪ್ಪ ಅವರು ಹೊಸ ಬಸ್ ನಿಲ್ದಾಣವನ್ನು ಸ್ಥಾಪನೆ ಮಾಡಿದ್ದರು. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಸಾರ್ವಜನಿಕರ ಸೇವೆಗೆ ಅನುಕೂಲ ಮಾಡಿಕೊಡಬೇಕಿದೆ. ಬಸ್ ನಿಲ್ದಾಣ ಖಾಸಗಿ ವ್ಯಕ್ತಿಗಳ ಸ್ವತ್ತಾಗಲು ಅವಕಾಶ ನೀಡಬಾರದು ಎಂದರು.

 

ಈ ಬಸ್ ನಿಲ್ದಾಣದಿಂದ ಗ್ರಾಮಾಂತರ ಪ್ರದೇಶದ ರೈತರು, ವಿದ್ಯಾರ್ಥಿಗಳು ಈ ಭಾಗದಲ್ಲಿ ಕಾಲೇಜು, ಸರ್ಕಾರಿ ಕಚೇರಿಗಳು, ಪೊಲೀಸ್ ಠಾಣೆ, ಎಪಿಎಂಸಿ, ಕ್ರೀಡಾಂಗಣ, ಅಂಚೆ ಕಚೇರಿ, ನಗರಸಭೆ ಕೋರ್ಟ್ ಸೇರಿದಂತೆ ದೈನಂದಿನ ಕೆಲಸಕ್ಕೆ ಬಂದು ಹೋಗುವ ಎಲ್ಲಾ ಸಾರ್ವಜನಿಕರಿಗೆ  ಅನುಕೂಲವಾಗಲಿದೆ ಎಂದರು.

ಅದೇರೀತಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸದೆ ಬಸ್ ನಿಲ್ದಾಣವನ್ನಾಗಿಯೇ ಮುಂದುವರಿಸಬೇಕು. ಬೇರೆ ಉದ್ದೇಶಕ್ಕೆ ಅನುವು ಮಾಡಿಕೊಟ್ಟಿದ್ದೆ ಆದಲ್ಲಿ ದೊಡ್ಡಬಳ್ಳಾಪುರದ ನಾಗರೀಕರ ಪರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ಚಿಂತಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಇದಕ್ಕೆ ಆಸ್ಪದ ನೀಡದೆ ಬಸ್‌ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮಾಡಿ ಉಳಿಸಿಕೊಂಡು, ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಘಟಕದ ವ್ಯವಸ್ಥಾಪಕ ಸಂತೋಷ್, ಇಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬಂಕ್ ಸ್ಥಾಪನೆಗೆ ಇರುವ ವಿರೋಧವನ್ನು ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯರ್ದರ್ಶಿ ರಮೇಶ್ ಇದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

21 minutes ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

29 minutes ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

2 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

3 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

5 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

11 hours ago